Advertisement

ಇಂದಿನಿಂದ ನಾಮಪತ್ರ ಸಲ್ಲಿಕೆ: ಕಾವೇರಲಿದೆ ಚುನಾವಣಾ ಕಣ

01:00 AM Mar 19, 2019 | Team Udayavani |

ಮಂಗಳೂರು/ಉಡುಪಿ: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಪ್ರಾರಂಭಗೊಳ್ಳಲಿದ್ದು, ಇದರೊಂದಿಗೆ ಚುನಾವಣಾ ಕಣ ಕಾವೇರಲಿದೆ. ಆದರೆ ಕರಾವಳಿಯಲ್ಲಿ ಪ್ರಮುಖ ಪಕ್ಷಗಳಾಗಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ. ಅವೆರಡರ ಅಭ್ಯರ್ಥಿಗಳ ಹೆಸರು ಪ್ರಕಟವಾಗುವುದರೊಂದಿಗೆ ಈ ಬಾರಿಯ ಲೋಕಸಭೆ ಚುನಾವಣಾ ಕಣ ರಂಗೇರಲಿದೆ.

Advertisement

ನಾಮಪತ್ರ ಸಲ್ಲಿಕೆಗೆ ಮಾ. 26 ಕೊನೆಯ ದಿನಾಂಕವಾಗಿದ್ದು ಮಾ. 27ರಂದು  ಪರಿಶೀಲನೆ ನಡೆಯಲಿದೆ. ಮಾ. 29 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ.  ಎ. 18ರಂದು ಚುನಾವಣೆ, ಮೇ 23ರಂದು ಮತಎಣಿಕೆ ನಡೆಯಲಿದೆ. 

ನೀತಿ ಸಂಹಿತೆ ಬಿಸಿ
ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದರೂ ಮಂಗಳವಾರದಿಂದ ಹೆಚ್ಚಿನ ತೀವ್ರತೆ ದೊರಕಲಿದೆ. ಸಮರ್ಪಕ ದಾಖಲೆಗಳಿಲ್ಲದೆ 50,000 ರೂ.ಗಿಂತ ಹೆಚ್ಚಿನ ನಗದು ಕೊಂಡೊಯ್ಯುವಂತಿಲ್ಲ. 10 ಲ.ರೂ.ಗಿಂತ ಹೆಚ್ಚಿನ ಮೊತ್ತ ಸಾಗಿಸಿದರೆ ಅದನ್ನು ಆದಾಯ ತೆರಿಗೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

ಜಾತ್ರೆ, ಯಕ್ಷಗಾನಕ್ಕೂ ನಿಯಮದ ಬಿಸಿ
ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯಬೇಕು. ಧ್ವನಿವರ್ಧಕದ ಅನುಮತಿ
ಯನ್ನು ಪೊಲೀಸ್‌ ಇಲಾಖೆಯಿಂದ ಪಡೆಯಬೇಕು. ಧ್ವನಿವರ್ಧಕವನ್ನು ಬೆಳಗ್ಗೆ 6ರಿಂದ ರಾತ್ರಿ 10ರ ವರೆಗೆ ಮಾತ್ರ ಉಪಯೋಗಿಸಲು ಅವಕಾಶವಿದೆ. ಇದು ಯಕ್ಷಗಾನಕ್ಕೂ ಅನ್ವಯವಾಗುತ್ತದೆ. ಜಾತ್ರೆಗೆ ಚುನಾವಣಾಧಿಕಾರಿಗಳ ಅನುಮತಿ ಅಗತ್ಯವಾಗಿದೆ.

ಮಂಗಳೂರಿಗೆ ಸಿಎಪಿಎಫ್‌ ಪಡೆ
ಚುನಾವಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಪೊಲೀಸ್‌ ಕಮಿಷನರೆಟ್‌ಗೆ ಕೇಂದ್ರೀಯ
ಸಶಸ್ತ್ರ ಪೊಲೀಸ್‌ ಪಡೆಯ (ಸಿಎಪಿಎಫ್‌) 91 ಮಂದಿ ಮಹಿಳಾ ಜವಾನರು ಆಗಮಿಸಿದ್ದು, ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಮಹಿಳಾ ಜವಾನರು ಕಳೆದ ನಾಲ್ಕು ದಿನಗಳಿಂದ ಮಂಗಳೂರಿನ ವಿವಿಧ ಭಾಗಗಳಲ್ಲಿ ಪಥಸಂಚಲನ ನಡೆಸಿದ್ದಾರೆ.

Advertisement

ನಾಮಪತ್ರ ಸಲ್ಲಿಕೆ ಮಾ. 19ರಂದು ಆರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾನರು ಮತ್ತು ಪೊಲೀಸರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಐದು ಮಂದಿಗೆ ಮಾತ್ರ ಅವಕಾಶ
ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಅಥವಾ ಸೂಚಕರು ಸೇರಿ ಒಟ್ಟು ಐವರು  ಉಪಸ್ಥಿತರಿರಬಹುದು. ಮಾಧ್ಯಮ ಪ್ರತಿನಿಧಿಗಳಿಗಳಿಗೆ ನಾಮಪತ್ರ ಸಲ್ಲಿಕೆಯ ವೀಡಿಯೋ ಹಾಗೂ ಛಾಯಾಚಿತ್ರಗಳನ್ನು ಜಿಲ್ಲಾ ಚುನಾವಣಾ ಶಾಖೆಯಿಂದಲೇ ಒದಗಿಸಿಕೊಡಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next