Advertisement

ಪದ್ಮ ಪುರಸ್ಕಾರಕ್ಕೆ ನಾಮನಿರ್ದೇಶನ ಆರಂಭ

01:22 AM May 30, 2019 | Team Udayavani |

ಹೊಸದಿಲ್ಲಿ: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ನೀಡಲಾಗುವ ಪದ್ಮ ಪುರಸ್ಕಾರಕ್ಕೆ ಅರ್ಹರನ್ನು ಸೂಚಿಸುವ ನಾಮನಿರ್ದೇಶನ ಪ್ರಕ್ರಿಯೆಯನ್ನು ಕೇಂದ್ರ ಗೃಹ ಸಚಿವಾಲಯ ಆರಂಭಿಸಿದೆ. ಮೇ 1 ರಿಂದಲೇ ಈ ಪ್ರಕ್ರಿಯೆ ಆರಂಭವಾಗಿದೆ. ಸೆಪ್ಟೆಂಬರ್‌ 15 ರ ವರೆಗೆ ನಾಮನಿರ್ದೇಶನ ಮಾಡಬಹುದಾಗಿದೆ. ಈ ಪ್ರಕ್ರಿಯೆಯಲ್ಲಿ ಅರ್ಹ ಗಣ್ಯರಿಗೆ 2020 ರ ಗಣರಾಜ್ಯೋತ್ಸವದ ದಿನ ಪ್ರಶಸ್ತಿ ಪುರಸ್ಕಾರ ಮಾಡಲಾಗುತ್ತದೆ. ಪದ್ಮ ಪುರಸ್ಕಾರದ ವೆಬ್‌ಸೈಟ್‌ ಡಿಡಿಡಿ.ಟಚಛಞಚಚಡಿಚrಛs.ಜಟv.ಜಿn ರಲ್ಲಿ ಸಲ್ಲಿಸಿದ ನಾಮನಿರ್ದೇಶನಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಎಲ್ಲ ಕೇಂದ್ರ ಸರಕಾರದ ಇಲಾಖೆಗಳು, ಭಾರತ ರತ್ನ ಮತ್ತು ಪದ್ಮ ವಿಭೂಷಣ ಪುರಸ್ಕೃತರು ಕೂಡ ನಾಮನಿರ್ದೇಶನ ಮಾಡಬಹುದಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next