Advertisement

ಶೃಂಗೇರಿಯ ಶಂಕರಾಚಾರ್ಯರರ ಪುತ್ಥಳಿ ಮೇಲೆ ಹಿಂದೂಯೇತರ ಬಾವುಟ!: ಪ್ರತಿಭಟನೆ

02:19 PM Aug 13, 2020 | keerthan |

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯರರ ಪುತ್ಥಳಿ ಮೇಲೆ ಮುಸ್ಲಿಂ ಬಾವುಟವನ್ನಿಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.

Advertisement

ಇಲ್ಲಿನ ಸರ್ಕಲ್ ಒಂದರಲ್ಲಿ ಸ್ಥಾಪಿಸಲಾಗಿದ್ದ ಶಂಕರಾಚಾರ್ಯರರ ಪುತ್ಥಳಿಯ ಮೇಲೆ ಕಡಿಗೇಡಿಗಳು ಬಾವುಟವನ್ನಿಟ್ಟು ಹೋಗಿದ್ದಾರೆ. ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿಯ ಘಟನೆ ನಡೆದು ದಿನಕಳೆಯುವ ಮೊದಲು ಸಮಾಜದ ಕೋಮು ಸಾಮರಸ್ಯ ಕದಡುವ ಯತ್ನ ನಡೆದಿದೆ.

ಪ್ರತಿಭಟನೆ: ಘಟನೆಯನ್ನು ಖಂಡಿಸಿ ಮಠದ ಭಕ್ತರು, ಹಿಂದೂ ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಶಾಸಕ ಡಿ.ಎನ್ ಜೀವರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೂಡಲೇ ಕಿಡಿಗೇಡಿಗಳನ್ನ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next