Advertisement

ಪಕ್ಷೇತರ ಬ್ಲಾಕ್‌ಮೇಲ್‌ ನಡೆಯದು-ಹಾಸನ ವಿಚಾರದಲ್ಲಿ ಭವಾನಿ ರೇವಣ್ಣಗೆ HDK ತಿರುಗೇಟು

09:50 PM Apr 08, 2023 | Team Udayavani |

ಬೆಂಗಳೂರು: ಹಾಸನ ಟಿಕೆಟ್‌ ವಿಚಾರದಲ್ಲಿ ಪಕ್ಷೇತರ ಸ್ಪರ್ಧೆ ಎಂಬ ಬ್ಲ್ಯಾಕ್‌ಮೇಲ್‌ ನನ್ನ ಬಳಿ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪರೋಕ್ಷವಾಗಿ ಭವಾನಿ ರೇವಣ್ಣ ಅವರಿಗೆ ತಿರುಗೇಟು ನೀಡಿದ್ದಾರೆ.

Advertisement

ಯಶವಂತಪುರದಲ್ಲಿ ಪಂಚರತ್ನ ಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆಂದು ದೇವೇಗೌಡರಿಗೆ ಎಮೋಶನಲ್‌ ಬ್ಲ್ಯಾಕ್‌ಮೇಲ್‌ ಮಾಡಬಹುದು. ಆದರೆ ನನ್ನ ಬಳಿ ಅದಕ್ಕೆ ಅವಕಾಶ ಇಲ್ಲ ಎಂದರು.

ಹಾಸನದಲ್ಲಿ ಕಾರ್ಯಕರ್ತನಿಗೆ ಟಿಕೆಟ್‌ ಎಂದು ನಿರಂತರವಾಗಿ ಹೇಳಿಕೊಂಡು ಬರುತ್ತಿದ್ದೇನೆ. ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ. ನನಗೆ ಜವಾಬ್ದಾರಿ ಕೊಟ್ಟ ಮೇಲೆ ನನಗೆ ಕಾರ್ಯಕರ್ತ ಮುಖ್ಯ ಎಂದು ತಿಳಿಸಿದರು.

ಸಾಮಾನ್ಯ ಕಾರ್ಯಕರ್ತ ಯಾರು, ಸಮರ್ಥವಾಗಿರುವವರು ಯಾರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಷ್ಟು ಬೇಗ ಹಾಸನ ಟಿಕೆಟ್‌ ಘೋಷಣೆಯಾಗಲಿದೆ ಎಂದರು. ಇದಕ್ಕೂ ಮುನ್ನ ಹಾಸನದ ನಿಯೋಗ ಭೇಟಿ ಮಾಡಿ ಸ್ವರೂಪ್‌ ಅವರಿಗೆ ಟಿಕೆಟ್‌ ಕೊಡಬೇಕು ಎಂದು ಮನವಿ ಮಾಡಿತು.

ಎಚ್‌ಡಿಕೆ ಭೇಟಿ ಮಾಡಿದ ಕೆಜಿಎಫ್ ಬಾಬು
ಚಿಕ್ಕಪೇಟೆಯ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಕೆಜಿಎಫ್ ಬಾಬು ಶನಿವಾರ ಯಶವಂತಪುರದ ಜೆಡಿಎಸ್‌ ಮುಖಂಡರೊಬ್ಬರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ನಲ್ಲಿ ಟಿಕೆಟ್‌ ಸಿಗುವುದು ಅನುಮಾನವಾದ್ದರಿಂದ ಜೆಡಿಎಸ್‌ನಿಂದ ಟಿಕೆಟ್‌ ಪಡೆದು ಅದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ಬಾಬು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next