Advertisement

ಅನಿವಾಸಿ ಕನ್ನಡಿಗರ ಸೋಂಕು ಪರೀಕ್ಷೆ ವರದಿ ಇಂದು

07:58 AM May 13, 2020 | Lakshmi GovindaRaj |

ಬೆಂಗಳೂರು: ಸೋಮವಾರ ಮುಂಜಾನೆ ಲಂಡನ್‌ನಿಂದ ಬೆಂಗಳೂರಿಗೆ ಬಂದಿಳಿದವರ ಸೋಂಕು ಪರೀಕ್ಷಾ ವರದಿ ಬುಧವಾರ ಬರಲಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಲಾಕ್‌ಡೌನ್‌ ಹಿನ್ನೆಲೆ ಲಂಡನ್‌ನಲ್ಲಿ  ಸಿಲುಕಿಕೊಂಡಿದ್ದ ಕನ್ನಡಿಗರ ಪೈಕಿ 326 ಮಂದಿಯನ್ನು ಸೋಮವಾರ ಮುಂಜಾನೆ 4 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿತ್ತು.

Advertisement

ನಿಲ್ದಾಣಕ್ಕೆ ಬಂದ ಕೂಡಲೇ ಎಲ್ಲರ ಆರೋಗ್ಯ ತಪಾಸಣೆ ಮಾಡಿ  ಹೋಟೆಲ್‌ ಕ್ವಾರಂಟೈನ್‌ಗೆ ಕಳುಹಿಸಲಾಗಿತ್ತು. ಈ ಪೈಕಿ ಅನಾರೋಗ್ಯ ಕಾಣಿಸಿ ಕೊಂಡಿದ್ದ ಗರ್ಭಿಣಿಯನ್ನು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆ ಯಿಂದ ಬಿಡುಗಡೆಯಾಗಿ ಹೋಟೆಲ್‌ಗೆ  ಸ್ಥಳಾಂತರಗೊಂಡಿದ್ದಾರೆ.

ಒಬ್ಬ ಕ್ಯಾನ್ಸರ್‌ ರೋಗಿಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸ ಲಾಗಿದೆ.  ಸೋಮವಾರ ಸಂಜೆಯಿಂದ ಹಾಗೂ ಮಂಗಳವಾರ ಮಧ್ಯಾಹ್ನದವರೆಗೂ ಎಲ್ಲರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿ ಸಲಾಗಿದ್ದು,  ವರದಿ ಬುಧವಾರ ಬರಲಿದೆ ಎಂದು ಆರೋಗ್ಯ ಇಲಾಖೆ ವೈದ್ಯ ಡಾ.ಪ್ರಭುದೇವ ಗೌಡ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next