Advertisement

ಜೆಡಿಎಸ್‌ನ ಯಾವ ಶಾಸಕರೂ ಪಕ್ಷ ಬಿಡಲ್ಲ

11:19 PM Sep 13, 2019 | Team Udayavani |

ಬಳ್ಳಾರಿ: ಜೆಡಿಎಸ್‌ನ ಐದಾರು ಶಾಸಕರು ಪಕ್ಷವನ್ನು ಬಿಟ್ಟು ಹೋಗುತ್ತಿದ್ದಾರೆ ಎಂಬುದೆಲ್ಲ ಕಪೋಲಕಲ್ಪಿತ. ಒಂದಷ್ಟು ಭಿನ್ನಾಭಿಪ್ರಾಯ ಇರಬಹುದು. ಆದರೆ, ಯಾರೂ ಪಕ್ಷ ಬಿಟ್ಟು ಹೋಗಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ, ಶಾಸಕ ಎಚ್‌.ಕೆ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈಗಾಗಲೇ ಪಕ್ಷ ಬಿಟ್ಟು ಹೋದವರ ಪರಿಸ್ಥಿತಿ ಏನಾಗಿದೆ ಎಂಬುದು ಗೊತ್ತಾಗಿದೆ. ಪಕ್ಷ ಬಿಟ್ಟವರೆಲ್ಲ ಕೋಮಾ ಸ್ಥಿತಿಯಲ್ಲಿದ್ದಾರೆ. ಪಕ್ಷದ ಶಾಸಕರಲ್ಲಿ ಕೆಲವರಿಗೆ ಸಚಿವ ಸ್ಥಾನ ಸಿಕ್ಕರೂ ಅಸಮಾಧಾನಗೊಂಡಿರುವುದು ದೊಡ್ಡ ದುರಂತ. ಪಕ್ಷದ ಟಿಕೆಟ್‌ ಪಡೆದು ಶಾಸಕರಾಗಿ ಅಧಿಕಾರ ಪಡೆದ ಬಳಿಕ ಸುಮ್ಮನೆ ಇರಬೇಕು. ಈ ರೀತಿ ಇಲ್ಲ ಸಲ್ಲದ ಹೇಳಿಕೆ ನೀಡಬಾರದು.

ಈ ರೀತಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದು ಕಂಡು ಬಂದಲ್ಲಿ ಕೂಡಲೇ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಆಪರೇಷನ್‌ ಕಮಲದ ಮೂಲಕ ಬಿಜೆಪಿ ಬೆಂಬಲಿಸಿದ ಕಾಂಗ್ರೆಸ್‌-ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ಬಿಜೆಪಿಯವರು ಮೊದಲು ನ್ಯಾಯ ಕೊಡಿಸಲಿ. ನಂತರ, ಮತ್ತೂಂದಿಷ್ಟು ಶಾಸಕರನ್ನು ಪಕ್ಷಕ್ಕೆ ಕರೆದುಕೊಳ್ಳಲಿ ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next