Advertisement

ಹಲವೆಡೆ ಸಾಧಾರಣ ಮಳೆ

11:39 PM Aug 21, 2019 | Lakshmi GovindaRaj |

ಮಂಗಳೂರು/ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಯಿತು. ಆಲೂರು, ಮಾಗಡಿ ಮತ್ತು ಬಸರಾಳುವಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ ತಲಾ 5 ಸೆಂ.ಮೀ.ಮಳೆ ಸುರಿಯಿತು.

Advertisement

ಇದೇ ಅವಧಿಯಲ್ಲಿ ಪುತ್ತೂರು, ಗುಬ್ಬಿ, ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ತಲಾ 4, ಸುಬ್ರಹ್ಮಣ್ಯ, ಸುಳ್ಯ, ಪಣಂಬೂರು, ರಾಮನಗರ, ಸರಗೂರು, ಚಾಮರಾಜನಗರಗಳಲ್ಲಿ ತಲಾ 3 ಸೆಂ.ಮೀ.ಮಳೆಯಾದ ವರದಿಯಾಗಿದೆ. ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next