Advertisement
– ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಬಂಡಾಯ ಮೊಳಗಿದ್ದು ಇದೇ ಭಾಗದಿಂದ. ಇದೀಗ ಸಮ್ಮಿಶ್ರ ಸರ್ಕಾರದ ಅಸ್ಥಿರತೆ ಧ್ವನಿ ಕೇಳಿ ಬರುತ್ತಿರುವುದು ಕೂಡ ಇದೇ ಭಾಗದಿಂದ. ಕಾಕತಾಳಿಯವೆಂದರೆ ಎರಡೂ ಸಂದರ್ಭಕ್ಕೆ ಪ್ರಕೃತಿಯ ಹಲವು ಸನ್ನಿವೇಶ ಸಾಮ್ಯತೆ ನೀಡತೊಡಗಿದೆ.
Related Articles
Advertisement
ಪ್ರಕೃತಿ-ಸನ್ನಿವೇಶದ ಕಾಕಾತಾಳಿಯ: 2009ರಲ್ಲಿ ಬಿಜೆಪಿ ಸರ್ಕಾರದಲ್ಲಿ ಎದ್ದ ಬಂಡಾಯಕ್ಕೂ, 2018ರಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಬಂಡಾಯದ ಕಾರ್ಮೋಡ ಕವಿಯುತ್ತಿರುವುದಕ್ಕೂ ಪ್ರಕೃತಿ ಹಾಗೂ ಸನ್ನಿವೇಶಗಳು ಕೆಲ ರೂಪದ ಸಾಮ್ಯತೆ ಕಾಕಾತಾಳಿಯ ಎನ್ನಬಹುದಾಗಿದೆ. 2009ರಲ್ಲಿ ಉ.ಕ. ಕಂಡರಿಯದ ಪ್ರವಾಹಕ್ಕೆ ಸಿಲುಕಿತ್ತು. ಆ ಸಂದರ್ಭದಲ್ಲಿಯೇ ಬಂಡಾಯದ ಭಾಗವಾಗಿ ಶಾಸಕರ ರೆಸಾರ್ಟ್ ವಾಸ ಆರಂಭವಾಗಿತ್ತು. ಉತ್ತರದ ಅನೇಕ ಶಾಸಕರು ಹೈದರಾಬಾದ್, ಗೋವಾ ಇನ್ನಿತರ ಕಡೆಗಳಲ್ಲಿ ಉಳಿದಿದ್ದರು. ಪ್ರವಾಹದ ಸ್ಥಿತಿ ಕಂಡಿದ್ದು, ಸೆಪ್ಟೆಂಬರ್ ಕೊನೆ ಹಾಗೂ ಅಕ್ಟೋಬರ್ ಮೊದಲ ವಾರದಲ್ಲಿ.
2018ರಲ್ಲಿ ಉತ್ತರದ ಅನೇಕ ಜಿಲ್ಲೆಗಳು ಅದರಲ್ಲೂ ಹೈದರಾಬಾದ್ ಕರ್ನಾಟಕದ ಬಹುತೇಕ ಜಿಲ್ಲೆಗಳು ಬರದಿಂದ ತತ್ತರಿಸಿವೆ. ಕೊಡಗು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ತನ್ನದೇ ಅನಾಹುತ ಸೃಷ್ಟಿಸಿದೆ. ಇದೀಗ ಸಮ್ಮಿಶ್ರ ಸರ್ಕಾರಕ್ಕೆ ಬಂಡಾಯದ ಬಿಸಿ ತಾಗುವ ಸ್ಥಿತಿ ನಿರ್ಮಾಣವಾಗಿದೆ. ಅದು ಸೆಪ್ಟೆಂಬರ್ನಲ್ಲಿಯೇ. 2009ರಲ್ಲಿ ಬಿಜೆಪಿ ಸರ್ಕಾರಕ್ಕೆ ಬಂಡಾಯ ಎದುರಾಗಿತ್ತು. ಇದಾದ 9 ವರ್ಷಕ್ಕೆ ಅಂದರೆ 2018ರಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರದಲ್ಲಿ ಬಂಡಾಯದ ಕಿಚ್ಚು ಹೆಚ್ಚತೊಡಗಿದೆ. ಎದ್ದಿರುವ ಬಂಡಾಯ ಶಮನಗೊಂಡು ಸುಖಾಂತ್ಯ ಸನ್ನಿವೇಶ ನಿರ್ಮಾಣವಾಗಲಿದೆಯೋ ಅಥವಾ ಮತ್ತೂಂದು ಸರ್ಕಾರ ಅಸ್ಥಿತ್ವ ಇಲ್ಲವೇ ಪತನಕ್ಕೆ ತಾನು ಕಾರಣ ಎಂಬ ಪಟ್ಟವನ್ನು ಉತ್ತರ ಕರ್ನಾಟಕ ಹೊತ್ತು ಇತಿಹಾಸ ಪುಟ ಸೇರಲಿದೆಯೋ ಕಾಲವೇ ನಿರ್ಣಯಿಸಬೇಕು.
– ಅಮರೇಗೌಡ ಗೋನವಾರ