Advertisement

‘ಉತ್ತರ’ಪ್ರವಾಹ: ಸಾವಿನ ಸಂಖ್ಯೆ 55ಕ್ಕೇರಿಕೆ

12:51 AM Jul 18, 2019 | Team Udayavani |

ನವದೆಹಲಿ: ಬಿಹಾರ, ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿ ಇನ್ನೂ ತಾರಕಕ್ಕೇರಿದ್ದು, ಬುಧವಾರದ ಹೊತ್ತಿಗೆ ಆ ಎರಡೂ ರಾಜ್ಯಗಳಲ್ಲಿ ಸಾವಿನ ಸಂಖ್ಯೆ 55ಕ್ಕೇರಿದೆ. ಉತ್ತರ ಪ್ರದೇಶದಲ್ಲಿ ಮಳೆಗೆ ಸಂಬಂಧಿಸಿದ ಘಟನೆಗಳಲ್ಲಿ 14 ಜನ ಸಾವಿಗೀಡಾಗಿದ್ದಾರೆ.

Advertisement

ನೆರೆಯ ನೇಪಾಳದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಅದರ ಪರಿಣಾಮ ಬಿಹಾರದಲ್ಲಿನ ಪ್ರವಾಹ ಪರಿಸ್ಥಿತಿ ಏರಿಕೆಯಾಗುತ್ತಲೇ ಇದೆ. ಮಂಗಳವಾರ-ಬುಧವಾರ ಅಲ್ಲಿ 33 ಜನರು ಸಾವನ್ನಪ್ಪಿದ್ದಾರೆ. 25.7 ಲಕ್ಷ ಜನರು ಆಶ್ರಯ ಕಳೆದುಕೊಂಡಿದ್ದಾರೆ

ಅಸ್ಸಾಂನಲ್ಲಿ, 17 ಜನರು ಸಾವಿಗೀಡಾಗಿದ್ದು, 45 ಲಕ್ಷಕ್ಕಿಂತಲೂ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ. ಬ್ರಹ್ಮಪುತ್ರಾ ಹಾಗೂ ಅದರ ಉಪನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಮಿಜೋರಂನಲ್ಲಿ ಪ್ರವಾಹಕ್ಕೆ 5 ಮಂದಿ ಬಲಿಯಾಗಿದ್ದಾರೆ.

ಉ.ಪ್ರದೇಶದಲ್ಲಿ 14 ಸಾವು: ಉತ್ತರ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ 14 ಜನರು ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ನೀಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್‌ ಘೋಷಿಸಿದ್ದಾರೆ. ಪಂಜಾಬ್‌, ಹರ್ಯಾಣ, ರಾಜಧಾನಿ ದೆಹಲಿಯಲ್ಲಿ ಉತ್ತಮ ಮಳೆಯಾಗಿದೆ.

ಸಾವಿನ ಸಂಖ್ಯೆ ಏರಿಕೆ: ಮುಂಬೈನ ಡೋಂಗ್ರಿಯಲ್ಲಿ ಮಂಗಳವಾರ ಸಂಭವಿಸಿದ್ದ 100 ವರ್ಷಗಳ ಹಳೆಯ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 14ಕ್ಕೇರಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಸ್ಥಗಿತಗೊಳಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next