Advertisement

ವಾಯವ್ಯ ಸಾರಿಗೆ ಸಂಸ್ಥೆ ನಿರ್ವಾಹಕನೊಬ್ಬನಿಗೆ ಕೋವಿಡ್-19 ಸೋಂಕು ದೃಢ

04:52 PM Jul 01, 2020 | keerthan |

ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆ ನಿರ್ವಾಹಕರೊಬ್ಬರಿಗೆ ಕೋವಿಡ್-19 ಸೋಂಕು ಕಂಡು ಬಂದಿದೆ ಎನ್ನಲಾಗಿದೆ. ಇಲ್ಲಿನ ಗ್ರಾಮಾಂತರ ವಿಭಾಗದ ಎರಡನೇ ಗ್ರಾಮಾಂತರ ಘಟಕದ ನಿರ್ವಾಹಕನಿಗೆ ಕೋವಿಡ್ ಸೋಂಕು ದೃಢವಾಗಿದೆ.

Advertisement

ಈತ ಒಂದು ವಾರ ಕರ್ತವ್ಯ ನಿರ್ವಹಿಸಿ ರಜೆಯಲ್ಲಿದ್ದ ಎನ್ನಲಾಗಿದೆ. ಮೂರು ದಿನಗಳ ಹಿಂದೆ ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೊಳಗಾಗಿದ್ದರು. ಈತ ಮಂಗಳವಾರ ಸಂಜೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಕಿಮ್ಸ್ ಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗದಗ, ಕೊಪ್ಪಳ ಹಾಗೂ ಗಂಗಾವತಿ ಮಾರ್ಗದಲ್ಲಿ ಈ ನಿರ್ವಾಹಕ ಕಾರ್ಯ ನಿರ್ವಹಿಸಿದ್ದಾಗಿ ತಿಳಿದುಬಂದಿದೆ. ಈ ನಿರ್ವಾಹಕರೊಂದಿಗೆ ಕರ್ತವ್ಯ ನಿರ್ವಹಿಸಿದ ಚಾಲಕ, ಸಿಬ್ಬಂದಿಗೆ ಕೋವಿಡ್-19 ಪರೀಕ್ಷೆಗೆ ಸೂಚಿಸಲಾಗಿದೆ.

ಕಳೆದ 20 ದಿನಗಳ ಹಿಂದೆ ನಿರ್ವಾಹಕ ತನ್ನ ಕುಟುಂಬದವರನ್ನು ಊರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ನಿರ್ವಾಹಕನಿಗೆ ಸೋಂಕು ಹಿನ್ನೆಲೆಯಲ್ಲಿ

ಡಿಪೋ, ಬಸ್ಸುಗಳನ್ನು ಹಾಗೂ ಬಸ್ ನಿಲ್ದಾಣದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next