Advertisement

ಮಧ್ಯಾಹ್ನದ ಬಿಸಿಯೂಟಕ್ಕೆ ತೊಂದರೆಯಾಗಿಲ್ಲ: ಶಿಕ್ಷಣ ಇಲಾಖೆ

08:15 AM Feb 10, 2018 | Team Udayavani |

ಮಂಗಳೂರು: ಬಿಸಿ ಯೂಟ ನೌಕರರಿಗೆ ಮಾಸಿಕ 5,000 ರೂ. ವೇತನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿಐ ಟಿಯು ವತಿಯಿಂದನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 2‌ನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳೂರು ವಲಯದ ಅಕ್ಷರದಾಸೋಹ ನೌಕರರು ದ.ಕ. ಜಿ.ಪಂ.ಆವರಣ ದಲ್ಲಿ ಶುಕ್ರವಾರದಿಂದ ಮುಷ್ಕರ ಹಮ್ಮಿಕೊಂಡಿದ್ದಾರೆ.

Advertisement

ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ಸುಮಾರು 200 ಮಂದಿ ನೌಕರರು ಪಾಲ್ಗೊಂಡಿ ದ್ದರು. ಬಳಿಕ ಜಿಲ್ಲಾ ಕೇಂದ್ರದಲ್ಲಿ ಮುಷ್ಕರ ಹಮ್ಮಿಕೊಂಡಿದ್ದು, ಜಿ.ಪಂ. ಆವರಣದಲ್ಲಿ 350ಕ್ಕೂ ಹೆಚ್ಚು ಅಕ್ಷರದಾಸೋಹ ಸಿಬಂದಿ ಮುಷ್ಕರ ನಿರತರಾಗಿದ್ದಾರೆ.  
“ಬಿಸಿಯೂಟ ನೌಕರರಿಗೆ 5000 ರೂ. ವೇತನ ನೀಡಬೇಕು. 45ನೇ ಭಾರ ತೀಯ ಕಾರ್ಮಿಕರ ಸಮ್ಮೇಳನದ ಶಿಫಾರಸಿನಂತೆ ಈ ನೌಕರರಿಗೆ ಕನಿಷ್ಠ ಕೂಲಿ ಮತ್ತು ಸಾಮಾಜಿಕ ಭದ್ರತೆ ಒದಗಿಸ ಬೇಕು ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಮುಷ್ಕರ ನಡೆಸು ತ್ತಿದ್ದೇವೆ. ಈವರೆಗೆ ನಮ್ಮ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಸಂಬಂಧಪಟ್ಟ ಯಾವುದೇ ಅಧಿಕಾರಿಗಳು ಬಂದಿಲ್ಲ’ ಎಂದು ಸಂಘದ ಕಾರ್ಯದರ್ಶಿ ಗಿರಿಜಾ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next