Advertisement

ಬಾಲಿವುಡ್‌ ಹಿಂದೆ ಬಿದ್ದಿಲ್ಲ | ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ

04:12 PM Oct 06, 2021 | Team Udayavani |

ಮುಂಬೈ: “ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಸಂಸ್ಥೆ (ಎನ್‌ಸಿಬಿ), ಬಾಲಿವುಡ್‌ ನಟ-ನಟಿಯರನ್ನು ಉದ್ದೇಶಪೂರ್ವಕವಾಗಿ ಯಾವುದೇ ಡ್ರಗ್ಸ್‌ ಪ್ರಕರಣದಲ್ಲಿ ಸಿಕ್ಕಿಹಾಕಿಸಿಲ್ಲ” ಎಂದು ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಸ್ಪಷ್ಟಪಡಿಸಿದ್ದಾರೆ.

Advertisement

ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬಂಧನ ಬೆನ್ನಲ್ಲೆ ಅನೇಕರು ಎನ್‌ಸಿಬಿಯು ಬಾಲಿವುಡ್ ಮಂದಿಯ ಹಿಂದೆ ಬಿದ್ದಿದೆ ಎಂದು ಟೀಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ವಾಂಖೆಡೆ, “ತನಿಖೆಯ ವೇಳೆ ಸಿಕ್ಕ ಸಾಕ್ಷ್ಯಾಧಾರಗಳಿಗೆ ಅನುಗುಣವಾಗಿ ಬಾಲಿವುಡ್ಡಿಗರ ಹೆಸರುಗಳನ್ನು ಉಲ್ಲೇಖೀಸಲಾಗಿದೆ. ನಮ್ಮ ಉದ್ದೇಶ ದೇಶವನ್ನು ಮಾದಕ ವಸ್ತುಗಳ ಜಾಲದಿಂದ ರಕ್ಷಿಸುವುದೇ ಆಗಿದ್ದು, ಸಿನಿಮಾ ಮಂದಿಯನ್ನು ಅನವಶ್ಯಕವಾಗಿ ಸಿಲುಕಿಸುವ ಯಾವುದೇ ಉದ್ದೇಶ ನಮಗಿಲ್ಲ. ಆದರೆ, ತಪ್ಪು ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ” ಎಂದಿದ್ದಾರೆ.

ಇದೇ ವೇಳೆ ಡ್ರಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಎನ್‌ಸಿಬಿ, ಮಂಗಳವಾರ ಇನ್ನೂ ನಾಲ್ವರನ್ನು ಬಂಧಿಸಿದೆ. ಒಟ್ಟು ಬಂಧಿತರ ಸಂಖ್ಯೆ 12ಕ್ಕೇರಿದೆ.

Advertisement

Udayavani is now on Telegram. Click here to join our channel and stay updated with the latest news.

Next