Advertisement

ಡಿಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ,ಕೊಟ್ರೆ ಸಂತೋಷ:ಶಾಮನೂರು ಶಿವಶಂಕರಪ್ಪ

04:06 PM May 24, 2018 | |

ಬೆಂಗಳೂರು: ನಾನು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ,ಕೊಟ್ರೆ ಸಂತೋಷದಲ್ಲಿ ಸ್ವೀಕರಿಸುತ್ತೇನೆ ಎಂದು ಹಿರಿಯ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ .

Advertisement

ಗುರುವಾರ ಮಾಜಿ ಪ್ರಧಾನಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾದ ಶಿವಶಂಕರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಹೇಳಿಕೆ ನೀಡಿದ್ದಾರೆ. 

ಕಾಂಗ್ರೆಸ್‌ನ ಎಲ್ಲಾ ಲಿಂಗಾಯತ ಶಾಸಕರು ಒಟ್ಟಾಗಿದ್ದೇವೆ.ನಾವು ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ ಎಂದರು. 

ಲಿಂಗಾಯತರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಹಲವು ಸ್ವಾಮೀಜಿಗಳು ಕಾಂಗ್ರೆಸನ್ನು ಒತ್ತಾಯಿಸಿದ್ದರು. ಹಿರಿಯ ಶಾಸಕರಾಗಿರುವ ಶಾಮನೂರು ಇಲ್ಲವಾದಲ್ಲಿ ಎಂ.ಬಿ.ಪಾಟೀಲ್‌ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂಬ ಹಕ್ಕೊತ್ತಾಯ ಮಂಡಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next