Advertisement

ಡಿಕೆಶಿ ಟ್ರಬಲ್‌ ಶೂಟರ್‌ ಅಲ್ಲ, ಟ್ರಬಲ್‌ ಮ್ಯಾನ್‌

11:31 PM Apr 28, 2019 | Team Udayavani |

ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತವಾಗಿದ್ದು, ಸಚಿವ ಡಿ.ಕೆ.ಶಿವಕುಮಾರ ಅವರಂಥ ನೂರು ಜನ ಬಂದರೂ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಂದಗೋಳ ಉಪಚುನಾವಣೆಯ ಉಸ್ತುವಾರಿಯನ್ನು ಸಚಿವ ಡಿ.ಕೆ.ಶಿವಕುಮಾರ ಅವರಿಗೆ ವಹಿಸಿರುವುದನ್ನು ನೋಡಿದರೆ ಕಾಂಗ್ರೆಸ್‌ನಲ್ಲಿ ಉತ್ತರ ಕರ್ನಾಟಕದಲ್ಲಿ ನಾಯಕರಿಲ್ಲ ಎನಿಸುತ್ತಿದೆ. ಇಂತಹ ದುರ್ಗತಿ ಕಾಂಗ್ರೆಸ್‌ಗೆ ಬರಬಾರದಾಗಿತ್ತು. ಡಿ.ಕೆ.ಶಿವಕುಮಾರ ಅವರನ್ನು ಕಾಂಗ್ರೆಸ್‌ನಲ್ಲಿ ಟ್ರಬಲ್‌ ಶೂಟರ್‌ ಎನ್ನುತ್ತಾರೆ. ಆದರೆ, ಮೇ 23ರ ನಂತರ ಅವರು ಟ್ರಬಲ್‌ ಮ್ಯಾನ್‌ ಆಗಲಿದ್ದಾರೆ ಎಂದರು.

ಲಿಂಗಾಯತ ಧರ್ಮದ ವಿಚಾರದಲ್ಲಿ ಪರಸ್ಪರ ಕಚ್ಚಾಡಿಕೊಂಡಿದ್ದ ಸಚಿವರಾದ ಡಿ.ಕೆ.ಶಿವಕುಮಾರ ಹಾಗೂ ಎಂ.ಬಿ.ಪಾಟೀಲ ಅವರು ಕುಂದಗೋಳ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದು, ಈ ಕುರಿತು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಲಿ.
-ಜಗದೀಶ ಶೆಟ್ಟರ, ಮಾಜಿ ಮುಖ್ಯಮಂತ್ರಿ.

Advertisement

Udayavani is now on Telegram. Click here to join our channel and stay updated with the latest news.

Next