Advertisement

ಅತೃಪ್ತರೊಂದಿಗೆ ಗುರುತಿಸಿಕೊಂಡಿಲ್ಲ: ಗಣೇಶ್‌

11:51 PM Jul 08, 2019 | Lakshmi GovindaRaj |

ಬಳ್ಳಾರಿ: “ನಾನು ಅತೃಪ್ತ ಶಾಸಕರೊಂದಿಗೆ ಗುರುತಿಸಿಕೊಂಡಿಲ್ಲ. ನನ್ನ ಕ್ಷೇತ್ರದಲ್ಲೇ ಇರುವೆ. ಆದರೂ ನನ್ನ ಹೆಸರನ್ನು ಅತೃಪ್ತರೊಂದಿಗೆ ಥಳಕು ಹಾಕಲಾಗುತ್ತಿದೆ. ಅಲ್ಲದೆ ಕೆಲ ಮಾಧ್ಯಮಗಳೂ ಈ ಬಗ್ಗೆ ಸುದ್ದಿ ಬಿತ್ತರಿಸುತ್ತಿವೆ’ ಎಂದು ಕಂಪ್ಲಿ ಶಾಸಕ ಜೆ.ಎನ್‌.ಗಣೇಶ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

ಸೋಮವಾರ ಬಳ್ಳಾರಿಗೆ ಆಗಮಿಸಿದ್ದ ಅವರು ಮಾಜಿ ಶಾಸಕ ಎನ್‌. ಸೂರ್ಯನಾರಾಯಣರೆಡ್ಡಿ ಅವರನ್ನು ಭೇಟಿ ಮಾಡಿದ ಬಳಿಕ ವಿಡಿಯೋ ಒಂದನ್ನು ರೆಕಾರ್ಡ್‌ ಮಾಡಿ ಅದನ್ನು ಮಾಧ್ಯಮಗಳು ಹಾಗೂ ತಮ್ಮ ಆಪ್ತರ ಮೊಬೈಲ್‌ಗೆ ಕಳುಹಿಸಿದ್ದಾರೆ.

ವಿಡಿಯೋದಲ್ಲಿ ಏನಿದೆ?: “ನಾನು ಎಲ್ಲಿಗೂ ಹೋಗಿಲ್ಲ. ಕಳೆದೊಂದು ತಿಂಗಳಿಂದ ಕ್ಷೇತ್ರ ವ್ಯಾಪ್ತಿಯ ಕುರುಗೋಡು ಮತ್ತು ಕಂಪ್ಲಿ ಭಾಗದಲ್ಲಿಯೇ ಪ್ರವಾಸ ಕೈಗೊಂಡಿರುವೆ. ದೂರವಾಣಿಯಲ್ಲೂ ಯಾರೊಂದಿಗೂ ಮಾತನಾಡಿಲ್ಲ. ಶಾಸಕ ಗಣೇಶ ಬಿಜೆಪಿ ಜತೆ ಸಖ್ಯ ಬೆಳೆಸಿದ್ದಾರೆ ಎಂಬುದು ಕೇವಲ ಊಹಾಪೋಹ’ ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ಗೆ ನಿಷ್ಠನಾಗಿದ್ದು, ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ. ಮಂಗಳವಾರ ನಡೆಯಲಿರುವ ಸಿಎಲ್‌ಪಿ ಸಭೆಗೆ ಹಾಜರಾಗುವಂತೆ ಕರೆ ಬಂದಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಸಿಎಲ್‌ಪಿ ಸಭೆಗೆ ಹಾಜರಾಗುತ್ತೇನೆ. ಎಂತಹ ಸಂದರ್ಭ ಎದುರಾದ್ರೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಸದ್ಯ ಹಬ್ಬಿರುವ ಊಹಾಪೋಹಗಳಿಗೆ ಕ್ಷೇತ್ರದ ಜನ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next