Advertisement

ಬಿಜೆಪಿ ಬಿಡಲ್ಲ, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

08:51 PM Jul 04, 2023 | Team Udayavani |

ಹೊನ್ನಾಳಿ: ನಾನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿದ ತಕ್ಷಣ ಕಾಂಗ್ರೆಸ್‌ ಸೇರುತ್ತೇನೆ ಎಂದಲ್ಲ. ಬಿಜೆಪಿಯೇ ನನ್ನ ಪಕ್ಷವಾಗಿದ್ದು ಯಡಿಯೂರಪ್ಪ ನನ್ನ ನಾಯಕರು.

ಹೀಗಾಗಿ ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ. ಪ್ರಜಾತಂತ್ರ ವ್ಯವಸ್ಥೆಯಡಿ ಇದೀಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಿಂದಿನ ಸರ್ಕಾರದ ಯಾವುದೇ ಕೆಲಸಗಳ ಬಗ್ಗೆ ಯಾವುದೇ ತನಿಖೆ ನಡೆಸಲು ಈಗಿನ ಸರ್ಕಾರಕ್ಕೆ ಮುಕ್ತ ಅವಕಾಶವಿದೆ. ಇದಕ್ಕೆ ನಾವು ಸಿದ್ಧರಿದ್ದೇವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next