Advertisement

ಕಾಂಗ್ರೆಸ್ ಮುಗಿಸಲು ಜಮೀರ್ ಮಾತ್ರವಲ್ಲ ಬಹಳ ಜನಕ್ಕೆ ಸುಪಾರಿ ಕೊಟ್ಟಿದ್ದೇವೆ: ಆರ್.ಅಶೋಕ್

05:52 PM Jul 23, 2022 | Team Udayavani |

ಬೆಂಗಳೂರು: ಗಟ್ಟಿಯಾದ ಹೈಕಮಾಂಡ್ ನಮ್ಮದು. ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆಕೊಡಬಾರದು ಅನ್ನುವುದನ್ನು ತೀರ್ಮಾನಿಸುತ್ತದೆ ಎಂದು ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.

Advertisement

ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾವು ಬಿಎಸ್ ವೈ ಭೇಟಿ ಮಾಡಿದೆವು. ಅವರು ನಗುನಗುತ್ತಲೇ ಮಾತನಾಡಿದರು.ನನ್ನ ಜೀವವೇ ಬಿಜೆಪಿ ಅಂತ ಹೇಳುತ್ತಿದ್ದಾರೆ. ದೊಡ್ಡ ದೊಡ್ಡಸಮಾವೇಶ ಮಾಡೋಣ ಎಂದಿದ್ದಾರೆ’ ಎಂದರು.

‘ದೊಡ್ಡಬಳ್ಳಾಪುರ ರ್ಯಾಲಿ ಘೋಷಣೆ ಮಾಡಿದ್ದೇವೆ, ಮುಂದೆ ಯಾವ್ಯಾವ ಜಿಲ್ಲೆಯಲ್ಲಿ ಮಾಡಬೇಕು ಅದರ ಬಗ್ಗೆಯೂ ಮಾತನಾಡುತ್ತೇವೆ’ ಎಂದರು.

ಇದನ್ನೂ ಓದಿ : ಸಿಎಂ ಗಾದಿ ತಿಕ್ಕಾಟ : ಜಮೀರ್ ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ವಾರ್ನಿಂಗ್

‘ಕಾಂಗ್ರೆಸ್ ಮುಗಿಸೋಕೆ ಜಮೀರ್ ಗೆ ಸುಫಾರಿ ಕೊಟ್ಟಿದ್ದೀರಾ’ ಎಂಬ ಪ್ರಶ್ನೆಗೆ ಉತ್ತರಿಸಿ, ‘ಬಹಳಷ್ಟು ಜನಕ್ಕೆ ನಾವು ಸುಪಾರಿ ಕೊಟ್ಟಿದ್ದೇವೆ ನೋಡುತ್ತಾ ಇರಿ. ಯಾರು ಯಾರು ಬರುತ್ತಾರೆಂದು. ಕಾಂಗ್ರೆಸ್ ನಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ. ಅವರು ನಮ್ಮದನ್ನು ಏನು‌ ಹೇಳುತ್ತಾರೆ.ಅವರದನ್ನ ಮೊದಲು ಸರಿಪಡಿಸಿಕೊಳ್ಳಲಿ’ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next