Advertisement

ಕಾಂಗ್ರೆಸ್‌ ತೊರೆಯುವ ಮನಸ್ಸು ಮಾಡಿಲ್ಲ: ಅಂಬರೀಶ್‌

01:03 PM Nov 28, 2017 | Team Udayavani |

ಬೆಂಗಳೂರು: ಕಾಂಗ್ರೆಸ್‌ ತೊರೆಯುವ ಮನಸ್ಸು ಮಾಡಿಲ್ಲ ಎಂದು ಮಾಜಿ ಸಚಿವ ಕಾಂಗ್ರೆಸ್‌ ಶಾಸಕ ಅಂಬರೀಶ್‌
ಮಂಗಳವಾರ ಹೇಳಿಕೆ ನೀಡಿದ್ದಾರೆ. 

Advertisement

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. 

‘ನಾನು ನಿತ್ಯ ಬಿಜೆಪಿ, ಜೆಡಿಎಸ್‌ನವರೊಂದಿಗೆ ಮಾತನಾಡುತ್ತೇನೆ. ಅವರು ಕಾರ್ಯಕ್ರಮಕ್ಕೆ ಕರೆದರೆ ಹೋಗುತ್ತೇನೆ’ ಎಂದರು. 

‘ಹೈಕಮಾಂಡ್‌ ಮತ್ತೆ ಟಿಕೇಟ್‌ ನೀಡಿದರೆ ಮಾತ್ರ ಸ್ಪರ್ಧಿಸುತ್ತೇನೆ. ನನ್ನ ಪತ್ನಿಗಾಗಲಿ,ಪುತ್ರನಿಗಾಗಲಿ ರಾಜಕೀಯದಲ್ಲಿ ಆಸಕ್ತಿ ಇಲ್ಲ’ ಎಂದರು. 

ಇದೇ ವೇಳೆ ‘ರಮ್ಯಾ ಅವರು ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ’ ಎಂದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next