Advertisement

ನಾರಾಯಣ ಗುರು, ಭಗತ್ ಸಿಂಗ್ ಪಠ್ಯ ತೆಗೆದಿಲ್ಲ: ಸಚಿವ ಸುನಿಲ್ ಸ್ಪಷನೆ

01:42 PM May 19, 2022 | Team Udayavani |

ಬೆಂಗಳೂರು: ನಾರಾಯಣ ಗುರು, ಭಗತ್ ಸಿಂಗ್ ರನ್ನ ಪಠ್ಯದಿಂದ ತೆಗೆದು ಹಾಕಿಲ್ಲ. ಕೆಲವರು ಸುಳ್ಳು ಸುದ್ದಿ ಹಬ್ಬುತ್ತಿದ್ದಾರೆ ಎಂದು ಸಚಿವ ಸುನಿಲ್ ಕುಮಾರ್ ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಡ್ಗೆವಾರ್ ಭಾಷಣವನ್ನ ಪಠ್ಯದಲ್ಲಿ ಸೇರಿಸಿದರೆ ತಪ್ಪೇನಿದೆ ? ಅಷ್ಟಕ್ಕೂ ಕಾಂಗ್ರೆಸ್ ಗೆ ಹೆಡ್ಗೆವಾರ್ ಕಂಡರೆ ಭಯ ಯಾಕೆ ? ಎಂದು ಪ್ರಶ್ನಿಸಿದರು.

ಹೆಡ್ಗೆವಾರ್ ಅವರ ಪ್ರೇರಣೆಯಿಂದಲೇ ಕೋಟ್ಯಂತರ ಜನ ದೇಶಪ್ರೇಮದ ಕೆಲಸ ಮಾಡುತ್ತಿದ್ದಾರೆ. ಅವರ ಪ್ರೇರಣೆಯಿಂದಲೇ ಕೆಲಸ ಮಾಡುತ್ತಿದ್ದೇವೆ. ಅದು ನಮ್ಮ ಬದ್ಧತೆ ಎಂದರು.

ಪಠ್ಯದಿಂದ ನಾರಾಯಣ ಗುರುಗಳನ್ನ ಕೈಬಿಟ್ಟಿಲ್ಲ, ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಈ ಬಗ್ಗೆ ನಾನೇ ಸ್ವತಃ ಶಿಕ್ಷಣ ಸಚಿವರು, ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನ್ನಾಡಿದ್ದೇನೆ ಎಂದರು.

ಇದನ್ನೂ ಓದಿ : ಆರ್ ಎಸ್ಎಸ್ ಬಗ್ಗೆ ಮಾತಾಡದಿದ್ದರೆ ಕಾಂಗ್ರೆಸ್ ಗೆ ನಿದ್ದೆ ಬರಲ್ಲ: ಹಾಲಪ್ಪ ಆಚಾರ್

Advertisement

ಚಕ್ರವರ್ತಿ ಸೂಲಿಬೆಲೆ ಅವರು ತಾಯಿ ಭಾರತಿಗೆ ವಂದಿಸುವೆ ಎಂದು ಲೇಖನ ಬರೆದಿದ್ದಾರೆ. ಅದರಲ್ಲಿ ತಪ್ಪೇನಿದೆ? ತಾಯಿ ಭಾರತಿ ಎಂಬ ವಿಚಾರವನ್ನೂ ವಿರೋಧಿಸುವುದು ಯಾಕೆ? ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next