Advertisement

ಗೋಹತ್ಯೆ ನಿಷೇಧ ಕಾನೂನು ಅಗತ್ಯವಿರಲಿಲ್ಲ; ಸಿದ್ದರಾಮಯ್ಯ ಹೇಳಿಕೆ ಅವರ ವೈಯಕ್ತಿಕ: ಡಿಕೆಶಿ

02:48 PM Jan 06, 2021 | Team Udayavani |

ಬಂಟ್ವಾಳ: ಗೋಮಾಂಸ ಭಕ್ಷಣೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಅವರ ವೈಯಕ್ತಿಕ. ಅದು ಪಕ್ಷದ್ದಲ್ಲ. ಅದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Advertisement

ಬಂಟ್ವಾಳದಲ್ಲಿ ನಡೆಯುತ್ತಿರುವ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಗೋಹತ್ಯೆ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗೋಹತ್ಯೆ ನಿಷೇಧ ಕಾನೂನು ಅಗತ್ಯವಿರಲಿಲ್ಲ, ರಾಜಕಾರಣ ಉದ್ದೇಶದಿಂದ ಇದನ್ನ ಜಾರಿ ಮಾಡಿದ್ದಾರೆ. ಗೋವನ್ನ ಪೂಜಿಸುವ ಪದ್ಧತಿ ಮೊದಲಿನಿಂದಲೂ ಇದೆ. ಸಿದ್ದರಾಮಯ್ಯನವರು ಅವರ ಅಭ್ಯಾಸದ ಬಗ್ಗೆಯಷ್ಟೇ ಹೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಪಕ್ಷಕ್ಕೆ ನಷ್ಟವಿಲ್ಲ. ಕಾರ್ಯಕರ್ತರು ಬಗ್ಗೆ ಅಭಿಪ್ರಾಯ ತಿಳಿಸಿದರೆ ತಪ್ಪೇನಿದೆ ಎಂದರು.

ಎಲ್ಲಾ ವರ್ಗದ ಮಂದಿಯೂ ಹೈನುಗಾರಿಕೆ ಮಾಡುತ್ತಾರೆ. ಅವರೆಲ್ಲರಿಗೂ ಸರಕಾರ 25 ರಿಂದ 50 ಸಾವಿರ ರೂ. ಪರಿಹಾರ ನೀಡಲಿ. ಆಮೇಲೆ ಅವರ ಮನೆಗೆ ಬೇಕಾದರೂ ಕರೆದೊಯ್ಯಲಿ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ: ಅಭಿವೃದ್ಧಿ ವಿಚಾರದಲ್ಲಿ ನಾನು ಹೆದರೋ ಮಗ ಅಲ್ಲ : ಸರಕಾರದ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್

Advertisement

 

 

Advertisement

Udayavani is now on Telegram. Click here to join our channel and stay updated with the latest news.

Next