Advertisement

ರಾಜೀನಾಮೆ ನೀಡಲ್ಲ; ಜಿ.ಟಿ.ದೇವೇಗೌಡ

12:08 AM Jul 08, 2019 | Team Udayavani |

ಬೆಂಗಳೂರು: “ನಾನು ಯಾವುದೇ ಕಾರಣಕ್ಕೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ’ ಎಂದು ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, “ನಮಗೂ ಕೆಲವು ಅಸಮಾಧಾನಗಳಿವೆ. ಆದರೆ, ಅದಕ್ಕೆ ಪರಿಹಾರ ಕಂಡುಕೊಳ್ಳಲು ಬೇಕಾದ ಮಾರ್ಗಗಳಿವೆ. ಹಾಗೆಂದು ರಾಜೀನಾಮೆ ಪರಿಹಾರವಲ್ಲ. ನಾಯಕರ ಜತೆ ಕುಳಿತು ಚರ್ಚಿಸಬೇಕು’ ಎಂದು ಹೇಳಿದರು.

Advertisement

ನನ್ನನ್ನು ಜೆಡಿಎಸ್‌ ಪಕ್ಷದಿಂದ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲ್ಲಿಸಿದ್ದಾರೆ. ನಾನು ಯಾವುದೇ ಕಾರಣಕ್ಕೂ ಅಲ್ಲಿನ ಮತದಾರರಿಗೆ ಮೋಸ ಮಾಡುವುದಿಲ್ಲ. ಸರ್ಕಾರ ಉಳಿಸಿಕೊಳ್ಳಲು ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೂ ಸಿದ್ಧ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಇಷ್ಟೆಲ್ಲಾ ನಡೆಯುತ್ತಿದೆ ಎಂಬ ಮಾತುಗಳ ಬಗ್ಗೆ ಪ್ರತಿಕ್ರಿಯಿಸಿ, ಅಭಿವೃದ್ಧಿ ದೃಷ್ಟಿಯಿಂದ ಸಿದ್ದರಾಮಯ್ಯ ಸೇರಿ ಯಾರನ್ನೇ ಮುಖ್ಯಮಂತ್ರಿ ಮಾಡುವುದಾದರೆ ಮಾಡಲಿ ಬಿಡಿ. ಸರ್ಕಾರ ಉಳಿಸಿಕೊಳ್ಳುವುದು ನಮಗೆ ಮುಖ್ಯ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next