Advertisement

ಸಾಂಕ್ರಾಮಿಕ ರೋಗಗಳ‌ ಬಗ್ಗೆಯೂ ಇರಲಿ ಕಟ್ಟೆಚ್ಚರ

12:17 AM Jun 09, 2020 | Sriram |

ಉಡುಪಿ: ಮಳೆಗಾಲ ಆರಂಭಗೊಂಡಿದೆ. ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ ಹಾವಳಿ ಈ ಸಮಯದಲ್ಲಿ ಹೆಚ್ಚು ಕಾಡುತ್ತದೆ. ಸಾಂಕ್ರಾಮಿಕ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದರಿಂದ ಈ ರೋಗದ‌ ಹಾವಳಿ ತಡೆಯಬಹುದು.ಜೂನ್‌ನಿಂದ ನವೆಂಬರ್‌ವರೆಗೆ ಮಲೇರಿಯಾ, ಡೆಂಗ್ಯೂ ಅತಿ ಹೆಚ್ಚು ಬಾಧಿ ಸುವ ಸಮಯವಾಗಿದೆ.

Advertisement

ಮುಂಜಾಗ್ರತೆ ಅಗತ್ಯ
ಮಳೆಗಾಲದಲ್ಲಿ ಹರಡುವ ಇತರ ಸಾಂಕ್ರಾಮಿಕ ರೋಗಗಳು ತಗಲದಂತೆ ಮುನ್ನೆಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಅನುಸರಿಸುವುದು ಅತ್ಯಗತ್ಯ.

ಪರಿಸರ ಸ್ವಚ್ಛವಾಗಿಟ್ಟು ಕೊಳ್ಳಿ
ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿರಲಿ, ಮುಚ್ಚಳವಿಲ್ಲದ ಒವರ್‌ಹೆಡ್‌, ಸಿಮೆಂಟ್‌ ಟ್ಯಾಂಕ್‌ಗಳು, ತೆಂಗಿನ ಚಿಪ್ಪು, ಕುಡಿದು ಬಿಸಾಡಿದ ಎಳನೀರು ಚಿಪ್ಪು, ಮನೆಯ ಸುತ್ತಮುತ್ತ ಎಸೆದ ಪ್ಲಾಸ್ಟಿಕ್‌, ಟಯರ್‌ ಸಹಿತ ನೀರುನಿಲ್ಲುವ ಅವಕಾಶವಿರುವ ಎಲ್ಲ ಪರಿಕರ ಗಳು ಸೊಳ್ಳೆಗಳ ಉತ್ಪತ್ತಿ ತಾಣಗಳು. ಮನೆ, ಪರಿಸರದಲ್ಲಿ ಸೊಳ್ಳೆಗಳ ಉತ್ಪತ್ತಿಗೆ ಅವಕಾಶವಾಗದಂತೆ ಎಚ್ಚರ ವಹಿಸುವುದು ಅಗತ್ಯ.

ವೈದ್ಯರ ಸಲಹೆ ಪಡೆಯಿರಿ
ಜ್ವರ ಯಾವುದೇ ಇರಲಿ. ರಕ್ಷ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಖಾತ್ರಿ ಪಡಿಸಿಕೊಳ್ಳುವುದು ಒಳ್ಳೆಯದು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರಕಾರಿ ಆಸ್ಪತ್ರೆಗಳಲ್ಲಿ ರಕ್ತ ತಪಾಸಣೆಯನ್ನು ಮಾಡಿಸಿಕೊಳ್ಳಬಹುದು.

ಸೊಳ್ಳೆಗಳಿಂದ ರಕ್ಷಣೆ ಹೇಗೆ?
ಡೆಂಗ್ಯೂ ಹರಡುವ ಈಡಿಸ್‌ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಮಲೇರಿಯಾ ಹರಡುವ ಅನಾಫೆಲಿಸ್‌ ಸೊಳ್ಳೆ ರಾತ್ರಿ ಸಮಯದಲ್ಲಿ ಕಚ್ಚುತ್ತದೆ. ಹೀಗಾಗಿ ಸೊಳ್ಳೆಗ ಳಿಂದ ನಮ್ಮನ್ನು ರಕ್ಷಿಸಿ ಕೊಳ್ಳಲು ಕೆಲವು ಕ್ರಮ ಪಾಲಿಸು ವುದು ಅಗತ್ಯ. ಸಂಜೆ ಹೊತ್ತು ಕಿಟಿಕಿ ಬಾಗಿಲುಗಳನ್ನು ಭದ್ರವಾಗಿ ಮುಚ್ಚುವುದು ಅಥವಾ ಜಾಲರಿಗಳನ್ನು ಅಳವಡಿಸುವುದು, ಔಷಧ ಲೇಪನ ಮುಂತಾದ ಕ್ರಮಗಳನ್ನು ಅನುಸರಿಸುವ ಮೂಲಕ ಸೊಳ್ಳೆಗಳಿಂದ ರಕ್ಷಣೆ ಪಡೆಯಬಹುದು. ಮನೆಯ ಸುತ್ತ ಫಾಗಿಂಗ್‌ ಮಾಡಿಸುವುದು, ಸೊಳ್ಳೆ ನಿರೋಧಕ ಔಷಧ ಸಿಂಪಡಣೆ, ಸೊಳ್ಳೆ ಪರದೆಗಳ ಬಳಕೆ ಮಾಡುವುದು ಒಳಿತು.

Advertisement

ಇದನ್ನೆಲ್ಲ ಈಗಲೇ ಮಾಡಿ
ಓವರ್‌ಹೆಡ್‌ ಟ್ಯಾಂಕ್‌, ಸಿಮೆಂಟ್‌ ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿಡಿ. ಮನೆ ಸುತ್ತ ಎಸೆದ ಪ್ಲಾಸ್ಟಿಕ್‌, ಟಯರ್‌, ತೆಂಗಿನ ಚಿಪ್ಪು ಗಳನ್ನು ತತ್‌ಕ್ಷಣ ವಿಲೇವಾರಿ ಮಾಡಿ, ಪಾತ್ರೆಗಳನ್ನು ಕವುಚಿ ಹಾಕಬೇಕು.ಮನೆ ಒಳಗೆ, ಹೊರಗೆ ಇರುವ ಹೂವಿನ ಕುಂಡ, ಮನಿಪ್ಲಾಂಟ್‌ ಚಟ್ಟಿಗಳು, ಏರ್‌ಕೂಲರ್‌ಗಳಲ್ಲೂ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ ಇವುಗಳ ನೀರನ್ನು ಪ್ರತಿ ವಾರ ಖಾಲಿ ಮಾಡುತ್ತಿರಬೇಕು.

ಮನೆ ಮನೆಗೆ ತೆರಳಿ ಜಾಗೃತಿ
ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಮಲೇರಿಯಾ ಸಹಿತ ಸಾಂಕ್ರಾಮಿಕ ರೋಗಗಳ ಬಗ್ಗೆ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಪ್ರಾ. ಆರೋಗ್ಯ ಕೇಂದ್ರಗಳಲ್ಲಿ ಉಚಿತ ರಕ್ತ ತಪಾಸಣೆ ಮಾಡಿಸಿಕೊಳ್ಳಬೇಕು.
– ಡಾ| ಪ್ರಶಾಂತ್‌, ಜಿಲ್ಲಾ ಮಲೇರಿಯಾ ಅಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next