Advertisement

ಇನ್ಮುಂದೆ ಎಚ್‌ಡಿಕೆ ಬಗ್ಗೆ ಮಾತಾಡಲ್ಲ’

06:45 AM Sep 24, 2018 | Team Udayavani |

ಸಿರಿಗೆರೆ: ಇನ್ನು ಮುಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಮಾತನಾಡಬಾರದೆಂದು ತೀರ್ಮಾನಿಸಿದ್ದೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೇ ಹೊರತು ಯಡಿಯೂರಪ್ಪನನ್ನು ಟೀಕೆ ಮಾಡುತ್ತಾ ಕುಳಿತುಕೊಳ್ಳುವುದರಿಂದ ಯಾವ ಲಾಭವೂ ಇಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ನಾನು ಮುಖ್ಯಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ. ವಿರೋಧ ಪಕ್ಷದಲ್ಲಿದ್ದು  ಕೊಂಡು ಕೆಲಸ ಮಾಡಲು ಜನರು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಅಲ್ಲಿಯೇ ಇದ್ದು ನಮ್ಮ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಶಾಸಕಸುರೇಶ್‌ ಗೌಡ ಅವರಿಗೆ ಬಿಜೆಪಿ ಆಫರ್‌ ಕೊಟ್ಟಿದೆ  ಎಂದು ಇಲ್ಲಸಲ್ಲದ ಮಾತನಾಡುತ್ತಿದ್ದಾರೆ. ಆ ರೀತಿ ಹೇಳುತ್ತಿರುವವರು ದಾಖಲೆಗಳದ್ದರೆ ಬಿಡುಗಡೆ ಮಾಡಲಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next