Advertisement

ಬ್ಯಾಂಕ್‌ ನೋಟಿಸ್‌ಗೆ ಭಯಪಡಬೇಕಿಲ್ಲ

07:00 AM Aug 07, 2018 | |

ಬೆಂಗಳೂರು: ರೈತರ ಸಾಲ ಮನ್ನಾ ಕುರಿತಂತೆ ಇನ್ನೊಂದು ವಾರದಲ್ಲಿ ಎಲ್ಲ ಗೊಂದಲ ಬಗೆಹರಿಯಲಿದ್ದು, ಸಾಲ
ಮರುಪಾವತಿಗಾಗಿ ಬ್ಯಾಂಕ್‌ ನೋಟಿಸ್‌ಗಳಿಗೆ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಹಕಾರ ಸಚಿವ
ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.

Advertisement

ಸೋಮವಾರ ಜೆಡಿಎಸ್‌ ಕಚೇರಿ ಜೆ.ಪಿ.ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಾಲ ಮನ್ನಾ ಕುರಿತಂತೆ ಸರ್ಕಾರ ಇನ್ನೂ ಆದೇಶ ಹೊರಡಿಸಿಲ್ಲ. ಹೀಗಾಗಿ ಬ್ಯಾಂಕ್‌ಗಳಿಗೆ ಸಾಲ ಮನ್ನಾದ
ಆದೇಶ ತಲುಪಿಲ್ಲ. ಆ ಕಾರಣದಿಂದ ನೋಟಿಸ್‌ ನೀಡುತ್ತಿದ್ದಾರೆ. ಇದಕ್ಕೆ ರೈತರು ಆತಂಕ ಪಡಬೇಕಿಲ್ಲ ಎಂದರು.

ಸರ್ಕಾರ ಘೋಷಣೆ ಮಾಡಿರುವ ಸಾಲ ಮನ್ನಾ ಯೋಜನೆ ಪೂರ್ಣ ಪ್ರಮಾಣದಲ್ಲಿ ರೈತರಿಗೆ ತಲುಪಲಿದೆ. ಸುಸ್ತಿ ಸಾಲದ ಜತೆಗೆ ಚಾಲ್ತಿ ಸಾಲ ಒಂದು ಲಕ್ಷ ರೂ.ವರೆಗಿನ ಸಾಲವೂ ಮನ್ನಾ ಆಗಲಿದ್ದು, ಇನ್ನೊಂದು ವಾರದಲ್ಲಿ ಈ ಕುರಿತು ಇರುವ ಎಲ್ಲಾ ಗೊಂದಲಗಳೂ ಬಗೆಹರಿಯಲಿವೆ.

ಸಾಲ ಮನ್ನಾ ವಿಚಾರದಲ್ಲಿ ರೈತರ ಹಿತ ಕಾಪಾಡಲು ಸರ್ಕಾರ ಬದಟಛಿವಾಗಿದೆ. ಹೀಗಾಗಿ ಬ್ಯಾಂಕ್‌ ನೀಡುವ ನೋಟಿಸ್‌ಗೆ ರೈತರು ಭಯಪಡಬೇಕಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next