ಮರುಪಾವತಿಗಾಗಿ ಬ್ಯಾಂಕ್ ನೋಟಿಸ್ಗಳಿಗೆ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಹಕಾರ ಸಚಿವ
ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.
Advertisement
ಸೋಮವಾರ ಜೆಡಿಎಸ್ ಕಚೇರಿ ಜೆ.ಪಿ.ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಆದೇಶ ತಲುಪಿಲ್ಲ. ಆ ಕಾರಣದಿಂದ ನೋಟಿಸ್ ನೀಡುತ್ತಿದ್ದಾರೆ. ಇದಕ್ಕೆ ರೈತರು ಆತಂಕ ಪಡಬೇಕಿಲ್ಲ ಎಂದರು. ಸರ್ಕಾರ ಘೋಷಣೆ ಮಾಡಿರುವ ಸಾಲ ಮನ್ನಾ ಯೋಜನೆ ಪೂರ್ಣ ಪ್ರಮಾಣದಲ್ಲಿ ರೈತರಿಗೆ ತಲುಪಲಿದೆ. ಸುಸ್ತಿ ಸಾಲದ ಜತೆಗೆ ಚಾಲ್ತಿ ಸಾಲ ಒಂದು ಲಕ್ಷ ರೂ.ವರೆಗಿನ ಸಾಲವೂ ಮನ್ನಾ ಆಗಲಿದ್ದು, ಇನ್ನೊಂದು ವಾರದಲ್ಲಿ ಈ ಕುರಿತು ಇರುವ ಎಲ್ಲಾ ಗೊಂದಲಗಳೂ ಬಗೆಹರಿಯಲಿವೆ.
Related Articles
Advertisement