Advertisement

ಎರಡಲ್ಲ, ಒಂದೇ ಕಂತಲ್ಲಿ ಸಾಲ ಮನ್ನಾ: ಖಾಶೆಂಪುರ

06:50 AM Jun 25, 2018 | |

ಬೀದರ: ಎರಡು ಕಂತುಗಳಲ್ಲಿ ಸಾಲ ಮನ್ನಾ ಮಾಡುವುದಿಲ್ಲ. ಬದಲಿಗೆ ಏಕಕಾಲಕ್ಕೆ ರೈತರ ಬೆಳೆ ಸಾಲ ಮನ್ನಾ ಮಾಡುವ ಆಲೋಚನೆ ಸರ್ಕಾರದ್ದಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ತಿಳಿಸಿದ್ದಾರೆ.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕಂತಿನಲ್ಲಿ ಸಾಲ ಮನ್ನಾ ಮಾಡಿದರೆ ರೈತರಿಗೆ ಋಣಮುಕ್ತ ಪತ್ರ ಕೊಡಲು ಸಾಧ್ಯವಾಗುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಗಳು ರೈತರಿಗೆ ಋಣ ಮುಕ್ತ ಪ್ರಮಾಣ ಪತ್ರ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಹೀಗಾಗಿ, ಒಂದೇ ಕಂತಿನಲ್ಲಿ ಸಾಲ ಮನ್ನಾ ಮಾಡಿ ಋಣಮುಕ್ತ ಪ್ರಮಾಣ ಪತ್ರ ನೀಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next