Advertisement

ಬೆಂಗಳೂರಿಗರೇ ಗಮನಿಸಿ:ಭಾನುವಾರ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಬದಲಿ ಮಾರ್ಗಗಳು ಇಲ್ಲಿವೆ

10:07 AM Jan 25, 2020 | Mithun PG |

ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮ ಹಿನ್ನೆಲೆ ಭಾನುವಾರ ಎಂಜಿ ರಸ್ತೆ ಹಾಗೂ ಕಬ್ಬನ್ ರಸ್ತೆ ಕೆಲ ಭಾಗ ಸಂಚಾರ  ನಿರ್ಬಂಧಿಸಲಾಗಿದೆ.  ಜ.26 ರಂದು ಬೆಳಗ್ಗೆ 8 ರಿಂದ 10.30ರ ವರೆಗೆ ಕಬ್ಬನ್‌ ರಸ್ತೆಯ ಬಿಆರ್‌ ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೂ ಎರಡೂ ದಿಕ್ಕುಗಳಲ್ಲಿ ಸಂಚಾರ ನಿರ್ಬಂಧಿಸಿದ್ದು, ಪರ್ಯಾಯ ಮಾರ್ಗವನ್ನು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

Advertisement

* ಕಬ್ಬನ್‌ ಪಾರ್ಕ್‌, ಬಿವಿಆರ್‌ ಜಂಕ್ಷನ್‌ ಕಡೆಯಿಂದ ಮಣಿಪಾಲ್‌ ಸೆಂಟರ್‌ ಕಡೆಗೆ ಸಂಚರಿಸುವ ವಾಹನಗಳು ಇನ್‌ ಫೆಂಟ್ರಿ ರಸ್ತೆಗೆ ಬಂದು ಸಫೀನಾ ಪ್ಲಾಜಾದ ಬಳಿ ಎಡ ತಿರುವು ಪಡೆದು ಮೈನ್‌ಗಾರ್ಡ್‌ ರಸ್ತೆ – ಆಲೀಸ್‌ ಸರ್ಕಲ್‌- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡೆಕನ್‌ಸನ್‌ ರಸ್ತೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ ಜಂಕ್ಷನ ಬಳಿ ಎಡಕ್ಕೆ ತಿರುವು ಪಡೆದು ಮನಿಪಾಲ್‌ ಸೆಂಟರ್‌ಗೆ ಹೋಗಬಹುದು.

* ಮಣಿಪಾಲ್‌ ಸೆಂಟರ್‌ ಕಡೆಯಿಂದ ಬಿಆರ್‌ವಿ ಜಂಕ್ಷನ್‌ ಕಡೆ ಹೋಗುವ ವಾಹನಗಳು ಎಂ.ಜಿ.ರಸ್ತೆಗೆ ತೆರಳಿ ಅನಿಲ್‌ಕುಂಬ್ಳೆ ವೃತ್ತದಲ್ಲಿ ಎಡಕ್ಕೆ ತಿರುವು ಪಡೆಯುವ ಮೂಲಕ ಸಾಗಬಹುದು.

ಭದ್ರತಾ ದೃಷ್ಟಿ ಹಿನ್ನೆಲೆ ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನವರೆಗೂ ಮಾಣೆಕ್ ಷಾ ಮೈದಾನ ಸುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ವಾಹನ ನಿಲುಗಡೆ ನಿಷೇಧಿಸಿದ ರಸ್ತೆಗಳು:

Advertisement

* ಸೆಂಟ್ರಲ್‌ ಸ್ಟ್ರೀಟ್‌, ಅನಿಲ್‌ ಕುಂಬ್ಳೆ ವೃತ್ತದಿಂದ ಶಿವಾಜಿ ನಗರ ಬಸ್‌ ನಿಲ್ದಾಣವರೆಗೆ.

* ಕಬ್ಬನ್‌ ರಸ್ತೆ, ಸಿಟಿಒ ವೃತ್ತ, ಕೆ.ಆರ್‌.ರಸ್ತೆ.

* ಎಂ.ಜಿ.ರಸ್ತೆ, ಅನಿಲ್‌ ಕುಂಬ್ಳೆ ವೃತ್ತದಿಂದ ಕ್ವೀನ್ಸ್‌ ರಸ್ತೆವರೆಗೆ.

Advertisement

Udayavani is now on Telegram. Click here to join our channel and stay updated with the latest news.

Next