Advertisement

ವಿಶ್ವನಾಥ್‌ ರಾಜೀನಾಮೆ ಬಗ್ಗೆ ನಾನೇನೂ ಹೇಳಲ್ಲ: ಬಿಎಸ್‌ವೈ

10:05 PM Jun 02, 2019 | Team Udayavani |

ಶಿವಮೊಗ್ಗ: “ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳಲ್ಲಿನ ಗೊಂದಲದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಜೆಡಿಎಸ್‌ ರಾಜ್ಯಾಧ್ಯಕ್ಷ ವಿಶ್ವನಾಥ್‌ ರಾಜೀನಾಮೆ ಬಗ್ಗೆ ನಾನು ಏನೂ ಹೇಳ್ಳೋಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳದ ಬಿಜೆಪಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾಗಿರುವ ವಿಚಾರ ನನಗೆ ತಿಳಿದಿಲ್ಲ ಎಂದರು. ರಾಜ್ಯದಲ್ಲಿ ಭೀಕರ ಬರ ಎದುರಾಗಿದೆ. ವರುಣದೇವ ಕೃಪೆ ತೋರದಿದ್ದರೆ ಸ್ಥಿತಿ ಚಿಂತಾಜನಕವಾಗಲಿದೆ.

ಬರ ನಿರ್ವಹಣೆ ವಿಷಯದಲ್ಲಿ ಸರ್ಕಾರವನ್ನು ದೂರುವುದಿಲ್ಲ. ಶಿವಮೊಗ್ಗದಲ್ಲೂ ನೀರಿಗೆ ಹಾಹಾಕಾರ ಉಂಟಾಗುವ ಸ್ಥಿತಿ ನಿರ್ಮಾಣವಾಗಿದೆ. ಬೇಗನೆ ಮಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದೊಂದೇ ಈಗಿರುವ ಮಾರ್ಗ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next