Advertisement

ಕೊರೊನಾ ವೈರಸ್: ಜನರು ಆತಂಕ ಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ ಶ್ರೀರಾಮುಲು

10:01 AM Mar 04, 2020 | keerthan |

ಬೆಂಗಳೂರು: ನಗರದಿಂದ ತೆಲಂಗಾಣಗೆ ತೆಳಿದ್ದ ವ್ಯಕ್ತಿಯಲ್ಲಿ ಕೊರೊನಾ  ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಆ ವ್ಯಕ್ತಿ ಕೆಲಸ ನಿರ್ವಹಿಸುತ್ತಿದ್ದ ಕಂಪನಿಯ ಎಲ್ಲಾ ಸಹೋದ್ಯೋಗಿಗಳು, ಆತನ ಜತೆ ರೂಮ್ ನಲ್ಲಿ ವಾಸವಿದ್ದ ವ್ಯಕ್ತಿ ಹಾಗೂ ಅಪಾರ್ಟ್ ಮೆಂಟ್ ನಿವಾಸಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.

Advertisement

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹೋದ್ಯೋಗಿಗಳನ್ನು 28 ದಿನಗಳವರೆಗೆ ನಿಗಾ ಇರಿಸಲಾಗುವುದು. ಇಲ್ಲಿಯವರೆಗೂ ವಿದೇಶದಿಂದ ಬಂದ 40 ಸಾವಿರ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದ್ದು ಯಾರಲ್ಲೂ ಸೋಂಕು ದೃಢಪಟ್ಟಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಕೊರೊನ ಸೋಂಕು ಹರಡದಂತೆ ಆರೋಗ್ಯ ಇಲಾಖೆ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯದಲ್ಲಿ ಎಲ್ಲಾ ಸರಕಾರಿ ಅಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್ ಗಳನ್ನು ಮಾಡಿ, ಒಟ್ಟು 630 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಶಂಕಿತ ರೋಗಿಗಳನ್ನು 24 ಗಂಟೆಗಳ ಕಾಲ ನಿಗಾ ವಹಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next