Advertisement

ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಬಗ್ಗೆ ತಪ್ಪಾಗಿ ಮಾತಾಡಿಲ್ಲ: ಲಕ್ಷ್ಮಣ್ ಸವದಿ

08:22 AM Sep 28, 2019 | Sriram |

ಅಥಣಿ: ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಬಗ್ಗೆ ತಪ್ಪಾಗಿ ಮಾತನಾಡಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನ್ನ ಮತ್ತು ಮಹೇಶ್ ಕುಮಟಳ್ಳಿ ಮಧ್ಯೆ ಭಿನ್ನಾಭಿಪ್ರಾಯ ತರುವ ಪ್ರಯತ್ನ ನಡೆದಿದೆ.

ಚುನಾವಣಾ ಸಂದರ್ಭವಾಗಿರುವುದರಿಂದ ಇದರ ಲಾಭ ಪಡೆಯಲು ಪ್ರಯತ್ನ ಮಾಡಲಾಗಿದೆ ಎಂದು ಲಕ್ಷ್ಮಣ್ ಸವದಿ ಆರೋಪಿಸಿದ್ದಾರೆ.

ನನ್ನ ಮತ್ತು ಮಹೇಶ್ ಕುಮಟಳ್ಳಿ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಮುಂದಿನ ದಿನಗಳಲ್ಲೂ ನಾವು ಸ್ನೇಹಿತರಾಗಿ ಇದ್ದುಕೊಂಡು ಹೋಗುತ್ತೇವೆ. ಈ ವಿಡಿಯೋದಲ್ಲಿ ಹೇಳಿದ್ದನ್ನು ಅಪಾರ್ಥ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next