Advertisement

ಅನುಕಂಪದ ಉದ್ಯೋಗ ವಿಶೇಷ ಪ್ರಕರಣ ಎಂದು ಪರಿಗಣಿಸಲು ಸೂಚನೆ

12:20 AM Jun 30, 2022 | Team Udayavani |

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ 2019-20ನೇ ಸಾಲಿನಲ್ಲಿ ಉತ್ತೀರ್ಣರಾಗಿರುವ ಪಿಯುಸಿ ಹಾಗೂ ಪದವಿ ತರಗತಿಗಳ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರಿಗೆ ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದೆ.

Advertisement

2019-20ರಲ್ಲಿ ಐಟಿಐ, ಡಿಪ್ಲೊಮಾ, ಎಂಜನಿಯರಿಂಗ್‌ ಪರೀಕ್ಷೆಗಳು ವಿಳಂಬವಾಗಿ ಫ‌ಲಿತಾಂಶಗಳು ತಡವಾಗಿತ್ತು. ಆದ್ದರಿಂದ ಕೋವಿಡ್‌ ಸಂದರ್ಭ ಮೃತರಾದ ಸರಕಾರಿ ನೌಕರರ ಕುಟುಂಬಸ್ಥರು ಅನುಕಂಪದ ಆಧಾರದಲ್ಲಿ ನೌಕರಿಗೆ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಿದ್ದರೆ, ಅವುಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸುವಂತೆ ತಿಳಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next