Advertisement

ಸಾಂಖ್ಯಿಕ ಅಧಿಕಾರಿಗಳಾಗಿರುವ ಶಿಕ್ಷಕರ ವರ್ಗಾವಣೆಗೆ ಸೂಚನೆ

09:56 PM Sep 22, 2022 | Team Udayavani |

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಾಗಿ ನೇಮಕವಾಗಿ ಹತ್ತಾರು ವರ್ಷಗಳಿಂದ ಇಲಾಖೆ ಕಚೇರಿಗಳಲ್ಲಿ ಬೋಧಕೇತರ ಸಿಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಸಾಂಖ್ಯಿಕ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಬಿಸಿ ಮುಟ್ಟಿಸಿದೆ.  ಅವರನ್ನು ಕೂಡಲೇ “ಸಿ’ ವಲಯಕ್ಕೆ ವರ್ಗಾಯಿಸಲು ಸೂಚಿಸಿದೆ.

Advertisement

ಡಯಟ್‌, ಸಿಟಿಇ ಮತ್ತು ಉಪ ನಿರ್ದೇಶಕರ ಕಚೇರಿಗಳಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಗಳಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಕೂಡಲೇ ವರ್ಗಾಯಿ ಸುವಂತೆ ಇಲಾಖೆ ಆಯುಕ್ತರು ಸಂಬಂಧಪಟ್ಟ ವಿಭಾಗೀಯ ಜಂಟಿ ನಿರ್ದೇಶಕರು ಹಾಗೂ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಯು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಈ ಹುದ್ದೆಗಳಲ್ಲಿ ತಜ್ಞ  ಸಿಬಂದಿ ಕಾರ್ಯನಿರ್ವಹಿಸಬೇಕಾಗಿದ್ದು, ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವುದು ಸರಿಯಲ್ಲ. ಇಲ್ಲಿರುವ ಶಿಕ್ಷಕರು ಈಗಾಗಲೇ “ಸಿ’ ವಲಯದಲ್ಲಿ 10 ಸೇವೆ ಸಲ್ಲಿಸಿದ್ದಲ್ಲಿ  ಎ, ಬಿ, ಸಿ ವಲಯದ ಯಾವುದಾದರೂ ಶಾಲೆಗೆ ಅವರ ಇಚ್ಛೆಗೆ ಅನುಸಾರವಾಗಿ  ನಿಯುಕ್ತಿಗೊಳಿಸಬೇಕು. ಈ ಸಂಬಂಧ ಕೈಗೊಂಡ ಕ್ರಮದ ಬಗ್ಗೆ 3 ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದು ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ. ಒಂದು ವೇಳೆ ವರದಿ ನೀಡದಿದ್ದರೆ ಸಂಬಂಧಪಟ್ಟ ಉಪ ನಿರ್ದೇಶಕರ ವಿರುದ್ಧವೇ ಶಿಸ್ತುಕ್ರಮ ಜರಗಿಸಲು ಶಿಫಾರಸು ಮಾಡಲಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next