Advertisement

ರೆಡ್ಡಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಸೂಚನೆ

06:00 AM Dec 05, 2018 | Team Udayavani |

ಬೆಂಗಳೂರು: ಆ್ಯಂಬಿಡೆಂಟ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಸಿಸಿಬಿ ಪೊಲೀಸರಿಗೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ಮಂಗಳವಾರ ಪುನಃ ವಿಸ್ತರಿಸಿದೆ.  ತಮ್ಮ ವಿರುದ್ಧ ಸಿಸಿಬಿ ಪೊಲೀಸರು ದಾಖಲಿಸಿರುವ ಎಫ್ ಐಆರ್‌ ರದ್ದುಪಡಿಸುವಂತೆ ಕೋರಿ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಅಲಿ ಖಾನ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯ  ಪೀಠ ವಿಚಾರಣೆ ನಡೆಸಿತು. ಪ್ರಕರಣದ ದೂರುದಾರರಿಗೆ ನೋಟಿಸ್‌ ಜಾರಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅರ್ಜಿದಾರರಾದ ಜನಾರ್ದನ ರೆಡ್ಡಿ ವಿರುದಟಛಿ ಬಲವಂತದ ಕ್ರಮ ಜರುಗಿಸದಂತೆ ನಿರ್ದೇಶನ ನೀಡಿ ನ್ಯಾಯಪೀಠ ವಿಚಾರಣೆ ಮುಂದೂಡಿತು.

Advertisement

ಆ್ಯಂಬಿಡೆಂಟ್‌ ವಂಚನೆ ಪ್ರಕರಣಕ್ಕೂ, ಜನಾರ್ದನ ರೆಡ್ಡಿ ಹಾಗೂ ಅಲಿ ಖಾನ್‌ಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ  ಅರ್ಜಿದಾರರು ನೇರವಾಗಿ ಭಾಗಿಯಾಗಿಲ್ಲ. ಆ್ಯಂಬಿಡೆಂಟ್‌ ಕಂಪನಿಯಲ್ಲಿ ಹೂಡಿಕೆ ಮಾಡುವಂತೆ ಜನಾರ್ದನ ರೆಡ್ಡಿ ಯಾರಿಗೂ ಹೇಳಿಲ್ಲ ಮತ್ತು ಸ್ವತಃ ಹೂಡಿಕೆ ಮಾಡಿಲ್ಲ. ಹೂಡಿಕೆ ದಾರರ ರಕ್ಷಣಾ ಕಾಯ್ದೆ ಅರ್ಜಿದಾರರಿಗೆ ಅನ್ವಯವಾಗುವುದಿಲ್ಲ. ಆದ್ದರಿಂದ ಎಫ್ ಐಆರ್‌ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಜನಾರ್ದನ ರೆಡ್ಡಿ ಪರ ಆರ್‌.ಪಿ.ಚಂದ್ರ ಶೇಖರ್‌ ಹಾಗೂ ಸಿಸಿಬಿ ಪರ ಬಿ.ಎನ್‌.ಜಗದೀಶ್‌ ವಾದ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next