Advertisement

ವಸತಿ ಯೋಜನೆ ಮಂಜೂರಾತಿಗೆ ಸೂಚನೆ

04:26 AM May 16, 2020 | Lakshmi GovindaRaj |

ಬೆಂಗಳೂರು: ವಸತಿ ಇಲಾಖೆ ವ್ಯಾಪ್ತಿಯ ಗೃಹ ಮಂಡಳಿ ಯೋಜನೆಗಳಿಗೆ ಸ್ಥಳೀಯ ಪ್ರಾಧಿಕಾರಗಳು ಶೀಘ್ರ ಮಂಜೂರಾತಿ ನೀಡುವಂತೆ ವಸತಿ ಸಚಿವ  ವಿ.ಸೋಮಣ್ಣ ಸೂಚಿಸಿದ್ದಾರೆ.

Advertisement

ಶುಕ್ರವಾರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕರ್ನಾಟಕ ಗೃಹ ಮಂಡಳಿ ಮೇಲೆ ಸಾರ್ವಜನಿಕರು  ಇಟ್ಟಿರುವ ವಿಶ್ವಾಸವನ್ನು ಹೆಚ್ಚಿಸುವ ದೃಷ್ಟಿಯಿಂದ ಹಾಗೂ ಸಾರ್ವಜನಿಕರಲ್ಲಿ ಸರ್ಕಾರಿ ಸಂಸ್ಥೆಗಳ ಬಗ್ಗೆ ಮತ್ತಷ್ಟು ವಿಶ್ವಾಸ ಹೆಚ್ಚಿಸಲು ನೆಲಮಂಗಲ, ಆನೇಕಲ್‌, ರಾಮನಗರದ ಮಾಗಡಿ ಸ್ಥಳೀಯ ಯೋಜನಾ ಪ್ರಾಧಿಕಾರಗಳು ಶೀಘ್ರ ಮಂಜೂರಾತಿ ನೀಡಿ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು.

ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ವಿರುದ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ವಸತಿ ಇಲಾಖೆ ಅಧಿಕಾರಿಗಳು  ಸ್ಥಳೀಯ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next