Advertisement

ನೆರೆ ಕಾಣಿಸಿಕೊಳ್ಳುವ ಮೊದಲೇ ಅಗತ್ಯ ವ್ಯವಸ್ಥೆಗೆ ಸೂಚನೆ: ಆರ್ ಅಶೋಕ್

04:55 PM May 22, 2020 | keerthan |

ಬೆಂಗಳೂರು: ನೆರೆ ಕಾಣಿಸಿಕೊಂಡ ನಂತರ ಪರಿಹಾರ ಘೋಷಣೆಗಿಂತ ನೆರೆ ಕಾಣಿಸಿಕೊಳ್ಳುವ ಮೊದಲೇ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ರಾಜ್ಯ ವಿಪತ್ತು ನಿಗ್ರಹ ನಿಧಿಯಡಿ 201 ಕೋಟಿ ರೂ.ನೀಡಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು.

Advertisement

ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ವೈರಸ್ ತಡೆ ಕಾರ್ಯಕ್ಕೆ ಈವರೆಗೆ  271 ಕೋಟಿ ರೂ.ಬಿಡುಗಡೆ ಮಾಡಲಾಗಿದ್ದು, ಅದರ ಬಳಕೆ ವಿವರ ನೀಡುವಂತೆ ಆರೋಗ್ಯ, ಪೊಲೀಸ್ ಇಲಾಖೆ ಜತೆಗೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಡುಗೈ ದಾನಿ. ಕೋವಿಡ್-19 ಸೋಂಕು ಹರಡುತ್ತಿದ್ದು, ದೇಶಾದ್ಯಂತ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಕಾಂಗ್ರೆಸ್ ಇದ್ದಿದ್ದರೆ ಒಂದು ಪ್ಯಾಕೇಜ್ ಕೂಡಾ ನೀಡುತ್ತಿರಲಿಲ್ಲ. ಆದರೆ ರೈತಪರ ಯಡಿಯೂರಪ್ಪ ಅವರು ಸಾಕಷ್ಟು ಪ್ಯಾಕೇಜ್ ಘೋಷಿಸಿದ್ದಾರೆ. ಪ್ರತಿ ಪಕ್ಷಗಳ ಟೀಕೆಯನ್ನು ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next