Advertisement

ರಂಜಾನ್ ಹಬ್ಬ : ಸಾಮೂಹಿಕ ಪ್ರಾರ್ಥನೆ ಮಾಡದಂತೆ ಪೊಲೀಸರ ಸೂಚನೆ

10:02 AM May 13, 2021 | Team Udayavani |

ಬೆಂಗಳೂರು : ನಾಳೆ ದೇಶಾದ್ಯಂತ ರಂಜಾನ್ ಹಬ್ಬವಿದ್ದು ಸಾಮೂಹಿಕ ಪ್ರಾರ್ಥನೆ ಮಾಡದಂತೆ ನಗರ ಪೊಲೀಸರು ಸೂಚಿಸಿದ್ದಾರೆ. ಕೋವಿಡ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮಸೀದಿಯ ಹಜರತ್​ ಗಳಿಗೆ ಪೊಲೀಸರು ಸೂಚನೆ ನೀಡಿದ್ದಾರೆ.

Advertisement

ಹಜರತ್ ಗಳಿಗೆ ಹೇಳಿರುವ ಪೊಲೀಸರು, ಮಸೀದಿಗೆ ಜನರು ಬರದಂತೆ ಹೇಳಿ. ಪ್ರಾರ್ಥನೆಯನ್ನು ಮನೆಯಲ್ಲಿಯೇ ಮಾಡಿ ಎಂದು ತಿಳಿಸಿ ಎಂದು ಹೇಳಿದ್ದಾರೆ. ಆಯಾ ಹಜಾರತ್ ಗಳು ತಮ್ಮ ಸುತ್ತ ಮುತ್ತ ಇರುವ ಮುಸಲ್ಮಾನ ಬಾಂಧವರಿಗೆ ತಿಳಿಸುವಂತೆ ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ನಾಳೆ ಹಬ್ಬ ಇರುವ ಕಾರಣ ಬೆಂಗಳೂರಿನ ಶಿವಾಜಿ ನಗರದಲ್ಲಿ ವ್ಯಾಪಾರದ ಭರಾಟೆ ಜೋರಾಗಿಯೇ ನಡೆದಿದೆ. ಈ ವೇಳೆ ಸಾಮಾಜಿಕ ಅಂತರ ಮಾಸ್ಕ್ ಇಲ್ಲದೆ ಜನರು ಕೋವಿಡ್ ನಿಯವನ್ನು ಗಾಳಿಗೆ ತೂರಿರುವ ದೃಶ್ಯಗಳು ಕಂಡುಬಂದಿವೆ.

Advertisement

Udayavani is now on Telegram. Click here to join our channel and stay updated with the latest news.

Next