Advertisement

ಮರಳು ದಂಧೆ ತಡೆಗೆ ಸೂಚನೆ

02:49 PM Jan 01, 2022 | Team Udayavani |

ಆಳಂದ: ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಣಿಕೆ ಹೆಚ್ಚುತ್ತಿರುವ ಕುರಿತು ಸಾಕಷ್ಟು ದೂರುಗಳು ಬಂದಿದ್ದು, ಈ ದಂಧೆ ತಡೆಗೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸಹಾಯಕ ಆಯುಕ್ತೆ ಮೋನಾ ರೋತ್‌ ತಹಶೀಲ್ದಾರ್‌ಗೆ ಸೂಚನೆ ನೀಡಿದರು.

Advertisement

ತಹಶೀಲ್ದಾರ್‌ ಕಚೇರಿಯಲ್ಲಿ ಕರೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಮರಳು ದಂಧೆಯಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರೂ ಅಂತಹವರ ವಿರುದ್ಧ ಕ್ರಮ ಜರುಗಿಸಿ, ಪ್ರಕರಣ ದಾಖಲಿಸಬೇಕು. ಈ ಕುರಿತು ದೂರು ಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಶಾಖೆಗಳ ಕಂದಾಯ ಕಡತಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ತೊಂದರೆ ಆಗದ ಹಾಗೇ ಅಂದಿನ ಕೆಲಸ ಅಂದೇ ಮುಗಿಸಿ ಮಾಡಿಕೊಡಿ. ಯಾವುದೇ ಕುಂಟುನೆಪ ಹೇಳುವಂತಿಲ್ಲ ಎಂದರು.

ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ, ತಾಪಂ ಇಒ ಡಾ| ಸಂಜಯ ರೆಡ್ಡಿ, ಸಿಪಿಐ ಮಂಜುನಾಥ, ಆರ್‌.ಟಿ.ಒ ಅಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಮೋನಮ್ಮ ಸುತಾರ, ಗ್ರೇಡ್‌-2 ತಹಶೀಲ್ದಾರ್‌ ಬಸವರಾಜ ರಕ್ಕಸಗಿ, ಶಿರಸ್ತೇದಾರ ಶ್ರೀನಿವಾಸ ಕುಲಕರ್ಣಿ, ಕಂದಾಯ ನಿರೀಕ್ಷಕ ಶಿವರುದ್ರಯ್ಯ ಸ್ವಾಮಿ, ರಾಜು ಸರಸಂಬಿ, ಅನೀಲ ನಿಂಬರ್ಗಾ, ಶರಣಬಸಪ್ಪ ಹಕ್ಕಿ, ವಿಎ ಆನಂದ ಪೂಜಾರಿ ಹಾಗೂ ಗ್ರಾಮ ಲೆಕ್ಕಿಗರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next