Advertisement

ಪ್ರಧಾನಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರಲು ಸೂಚನೆ

09:04 PM Nov 08, 2022 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತರಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ನೇಮಕ ಮಾಡಿರುವ ಬಸ್‌ನ ನೋಡೆಲ್‌ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ಕ್ಷೇಮವಾಗಿ ಕರೆತರಲು ಸೂಚಿಸಲಾಗಿದೆ.

ನ.11ಕ್ಕೆ ಬೆಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಆಯಾ ಕಾಲೇಜುಗಳಿಂದ ನಿಗದಿಪಡಿಸಿರುವಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕು. ಪ್ರಾಂಶುಪಾಲರ ಪೂರ್ವಬಾವಿ ಸಭೆಯಲ್ಲಿ ತೀರ್ಮಾನಿಸಿದಂತೆ ನಿಗದಿಪಡಿಸಿರುವ ಬಸ್‌ನಲ್ಲಿ ಕರೆತಂದು ಕಾರ್ಯಕ್ರಮ ಮುಗಿದ ಬಳಿಕ ಮತ್ತೆ ಸೂಕ್ತ ರೀತಿಯಲ್ಲಿ ಕರೆದುಕೊಂಡು ಹೋಗಲು ಸೂಚಿಸಲಾಗಿದೆ. ತಪ್ಪಿದಲ್ಲಿ ಮುಂದಿನ ಆಗು-ಹೋಗುಗಳಿಗೆ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next