Advertisement

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

11:46 AM Jun 28, 2018 | Team Udayavani |

ಚಾಮರಾಜನಗರ: ನಗರದ ವಿವಿಧೆಡೆ ಪ್ರಗತಿಯಲ್ಲಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಜಿಲ್ಲಾಧಿಕಾರಿ.ಬಿ. ಕಾವೇರಿ ಪರಿಶೀಲಿಸಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಗಾಳೀಪುರ ಬಡಾವಣೆ, ದೊಡ್ಡ ಅಂಗಡಿ ಬೀದಿ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ, ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ  ಬಳಿ ರಸ್ತೆ, ಪಿಕಾರ್ಡೋ  ಸ್ಪತ್ರೆ ರಸ್ತೆ ಹಾಗೂ ಕಲಾ ಮಂದಿರದ ಮುಂಭಾಗದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸ್ಥಳೀಯರು ಸಮಸ್ಯೆಗಳನ್ನು ಆಲಿಸಿ, ನಗರದ ಅಭಿವೃದ್ಧಿ ಉದ್ದೇಶದಿಂದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಸ್ಥಳೀಯರು ಸಹಕರಿಸಬೇಕು ಎಂದು ಮನವಿ ಮಾಡಿದರು.

ನಗರದ ಜೋಡಿ ರಸ್ತೆಯ ಜಿಲ್ಲಾಸ್ಪತ್ರೆ ಬಳಿ ನಡೆಯುತ್ತಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಕಾವೇರಿ, ಅಲ್ಲಿ ಆರ್ಧಕ್ಕೆ ನಿಲ್ಲಿಸಿರುವ ಚರಂಡಿ ಕಾಮಗಾರಿ ಪರಿಶೀಲಿಸಿದರು. ಜಿಲ್ಲಾಸ್ಪತ್ರೆಗೆ ಜಿಲ್ಲೆಯ ವಿವಿಧೆಡೆ ಗಳಿಂದ ದಿನನಿತ್ಯ ಆಗಮಿಸುವ ಸಾವಿರಾರು ರೋಗಿಗಳು, ಸಾರ್ವಜನಿಕರಿಗೆ ತೊಂದರೆಯಾಗಬಾರದು. ಅರ್ಧಕ್ಕೆ ನಿಂತಿರುವ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.

ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿ ನಿಯರ್‌ ಸತ್ಯಮೂರ್ತಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಜೂನಿಯರ್‌ ಎಂಜಿನಿಯರ್‌ ಶ್ರೀನಿವಾಸ್‌, ಲೋಕೊಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ವಿಜಯ್‌ಕುಮಾರ್‌, ಒಳಚರಂಡಿ (ಯುಜಿಡಿ) ಕಾಮಗಾರಿ ಎಂಜಿನಿಯರ್‌ ರಮೇಶ್‌ ಇತರರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next