Advertisement

ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

03:53 PM Dec 13, 2022 | Team Udayavani |

ರಬಕವಿ-ಬನಹಟ್ಟಿ: ತೇರದಾಳ ಮತಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ತೆಗೆದುಕೊಂಡು ಬರಲಾಗಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಮಗಾರಿಗಳು ಕುಂಠಿತಗೊಂಡಿವೆ. ಈ ಎಲ್ಲ ವಿಷಯಗಳನ್ನು ಬರುವ ಬೆಳಗಾವಿ ಅಧಿ ವೇಶನದಲ್ಲಿ ಚರ್ಚೆ ಮಾಡಲಾಗುವುದು. ಈ ಕಾಮಗಾರಿಗಳ ಪರಿಶೀಲನೆ ಮತ್ತು ಅವುಗಳಿಗೆ ವೇಗ ನೀಡುವುದರ ಜತೆಗೆ ಆದಷ್ಟು ಬೇಗನೆ ಕಾಮಗಾರಿ ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವ ನಿಟ್ಟಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿವೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

Advertisement

ಸೋಮವಾರ ಸ್ಥಳೀಯ ನಗರಸಭೆಯ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಗಳು ಮತ್ತು ಕಾರ್ಯ ನಿರ್ವಾಹಕ ಅಧಿಕಾರಿಗಳು ವಿವಿಧ ಇಲಾಖೆಗಳ ಪ್ರಗತಿ ಮುಂಚಿತವಾಗಿ ಪರಿಶೀಲನೆ ಮಾಡಿದ ನಂತರ ಶಾಸಕರ ಗಮನಕ್ಕೆ ತರಬೇಕು. ಇದರಿಂದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ರಸ್ತೆ ಕಾಮಗಾರಿಯ ಅಭಿವೃದ್ದಿಯ ನಿಟ್ಟಿನಲ್ಲಿ ಜಮಖಂಡಿಯ ಲೋಕೋಪಯೋಗಿ ಅಧಿಕಾರಿಗಳು ತೇರದಾಳ ಮತಕ್ಷೇತ್ರಕ್ಕೆ ತಾರತಮ್ಯ ಎಸಗುತ್ತಿದ್ದಾರೆ ಎಂದರು.

ತೇರದಾಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆಗೆ ಹೆಚ್ಚು ಗಮನ ನೀಡಬೇಕು. ಕಾಮಗಾರಿಗಳನ್ನು ಆರಂಭ ಮಾಡದ ಗುತ್ತಿಗೆದಾರರಿಗೆ ನೋಟಿಸ್‌ ನೀಡಿ ಪುನಃ ಟೆಂಡರ್‌ ಮಾಡುವಂತೆ ತಿಳಿಸಿದರು.

Advertisement

ಜಮಖಂಡಿ ತಾಲೂಕು ಆರೋಗ್ಯಾಧಿಕಾರಿ ಡಾ| ಜಿ.ಎಚ್‌.ಗಲಗಲಿ ಮಾತನಾಡಿ, ರಬಕವಿ ಬನಹಟ್ಟಿ ತಾಲೂಕಿನಲ್ಲಿ ಶೇ. 33 ಮಕ್ಕಳಿಗೆ ಮೆದುಳು ಜ್ವರದ ವ್ಯಾಕ್ಸಿನ್‌ ನೀಡಲಾಗಿದೆ. ಇದುವರೆಗೆ ತಾಲೂಕಿನಲ್ಲಿ ಯಾವುದೆ ಪ್ರಕರಣಗಳು ಪತ್ತೆಯಾಗಿಲ್ಲ. ತಾಲ್ಲೂನಲ್ಲಿ 11 ಸಂಶಾಯಸ್ಪದ ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಐದು ಖಚಿತಗೊಂಡಿವೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸನ್ನವರ ಮಾತನಾಡಿ, ವಿವೇಕ ಯೋಜನೆ ಅಡಿಯಲ್ಲಿ ರಬಕವಿ ಬನಹಟ್ಟಿ ತಾಲೂಕಿನ 18 ಶಾಲೆಗಳಿಗೆ 30 ಕೋಣೆಗಳು ಮಂಜೂರಾಗಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿ ತಾಲ್ಲೂಕಿನಲ್ಲಿ ವಿಶೇಷ ಗಮನ ನೀಡಲಾಗುತ್ತಿದೆ ಎಂದರು.

ಅಧಿಕಾರಿಗಳು ಶಾಸಕರ ಸಮಯವನ್ನು ತೆಗೆದುಕೊಂಡು ಅವರ ಕಾರ್ಯಾಲಯಕ್ಕೆ ಬಂದು ಇಲಾಖೆಗಳ ಪ್ರಗತಿಯ ಕುರಿತು ಚರ್ಚೆ ಮಾಡಬೇಕು ಎಂದರು.

ತಾಪಂ ಆಡಳಿತಾಧಿಕಾರಿ ಎಂ.ಜಿ.ಕೊಣ್ಣೂರ, ಕಾರ್ಯ ನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ, ತಹಶೀಲ್ದಾರ್‌ ಎಸ್‌.ಬಿ.ಇಂಗಳೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next