Advertisement

ವಿಚಾರಣೆ ಮುಂದುವರಿಸಲು ಸೂಚನೆ

11:01 PM Nov 12, 2019 | Team Udayavani |

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ನೀತಿ ಸಂಹಿತೆ ಮುಂದೂಡಿರುವ ಚುನಾವಣಾ ಆಯೋಗದ ಕ್ರಮ ಮತ್ತು ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ಮುಂದುವರಿಸುವಂತೆ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠಕ್ಕೆ ಮಂಗಳವಾರ ವಿಭಾಗೀಯ ನ್ಯಾಯಪೀಠ ಸೂಚಿಸಿದೆ.

Advertisement

ಈ ಕುರಿತಂತೆ ದಿನೇಶ್‌ ಗುಂಡೂರಾವ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಪ್ರದೀಪ್‌ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ನೀತಿ ಸಂಹಿತೆ ಮುಂದೂಡಿದ ಆಯೋಗದ ಕ್ರಮಕ್ಕೆ ತಡೆ ನೀಡಲು ನಿರಾಕರಿಸಿದ ಏಕಸದಸ್ಯ ನ್ಯಾಯಪೀಠದ ಕ್ರಮ ಪ್ರಶ್ನಿಸಿ ದಿನೇಶ್‌ ಗುಂಡೂರಾವ್‌ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮುಂದುವರಿಸುವಂತೆ ಏಕಸದಸ್ಯ ನ್ಯಾಯಪೀಠಕ್ಕೆ ನಿರ್ದೇಶನ ನೀಡಿ, ವಿಭಾಗೀಯ ನ್ಯಾಯಪೀಠವು ಮೇಲ್ಮನವಿಯನ್ನು ಇತ್ಯರ್ಥಪಡಿಸಿತು.

Advertisement

Udayavani is now on Telegram. Click here to join our channel and stay updated with the latest news.

Next