Advertisement

ಪ್ರತಿಪಕ್ಷ ಶಾಸಕರ ಯೋಜನೆ ಸ್ಥಗಿತಕ್ಕೆ ಸೂಚನೆ: ಡಿಕೆಶಿ

11:01 PM Jan 20, 2020 | Team Udayavani |

ಬೆಂಗಳೂರು: ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಮಂಜೂರಾಗಿದ್ದ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯವರಿಗೆ ಕ್ಷೇತ್ರಗಳ ಅಭಿವೃದ್ಧಿಗಿಂತ ರಾಜಕಾರಣವೇ ಮುಖ್ಯವಾಗಿದೆ. ಪ್ರತಿಪಕ್ಷಗಳ ಕ್ಷೇತ್ರಗಳ ಅಭಿವೃದ್ಧಿ ಅವರಿಗೆ ಬೇಕಿಲ್ಲ.

Advertisement

ಮೈತ್ರಿ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಿದ್ದ ಕೆಲಸಗಳನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಡುತ್ತಿದ್ದಾರೆ. ಇದಕ್ಕೆಲ್ಲ ಹೇಗೆ ಉತ್ತರ ಕೊಡಬೇ ಕೆಂದು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು. ಬಿಜೆಪಿಯವರಿಗೆ ಮಹದಾಯಿ, ಕಾವೇರಿ, ಕೃಷ್ಣೆಯ ಬಗ್ಗೆ ಕಾಳಜಿ ಇಲ್ಲ. ಆದರೆ, ಅದೇ ವಿಷಯದಲ್ಲಿ ಬರಿ ರಾಜಕಾರಣ ಮಾಡುವುದು ಬೇಕಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next