Advertisement

ಇನ್ನೊಮ್ಮೆ ಚರ್ಚಿಸಲು ಸೂಚನೆ

06:10 AM Jun 14, 2018 | Team Udayavani |

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕ ಪರಿಷ್ಕರಣೆಯ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ
ಅಧಿಕಾರಿಗಳು ಹಾಗೂ ಖಾಸಗಿ ಕಾಲೇಜು ಆಡಳಿತ ಮಂಡಳಿಗಳೊಂದಿಗೆ ಇನ್ನೊಮ್ಮೆ ಚರ್ಚಿಸುವಂತೆ ಸೂಚಿಸಿದ್ದೇನೆ
ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಸಭೆ ನಂತರ ಮಾತನಾಡಿದ ಅವರು, ಎಂಜಿನಿಯರಿಂಗ್‌ ಕಾಲೇಜಿನಲ್ಲಿ 3 ವರ್ಷದಿಂದ ಶುಲ್ಕ ಹೆಚ್ಚಳ ಮಾಡಿಲ್ಲ. ಇದ
ರಿಂದ ಸಂಸ್ಥೆಗಳನ್ನು ಮುನ್ನಡೆಸಲು ತೊಂದರೆಯಾಗುತ್ತಿದೆ. ಹೀಗಾಗಿ ಶೇ.30ರಷ್ಟು ಶುಲ್ಕ ಹೆಚ್ಚಳ ಮಾಡಬೇಕು ಎಂದು ಕೋರಿ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನ ನಿಯೋಗ ಮನವಿ ಸಲ್ಲಿಸಿದೆ ಎಂದು ಹೇಳಿದರು.

ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಕಾಲೇಜು ಆಡಳಿತ ಮಂಡಳಿ ಈ ಸಂಬಂಧ ಚರ್ಚೆ ನಡೆಸಲಿದ್ದಾರೆ. ವಿದ್ಯಾರ್ಥಿಗಳಿಗೆಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next