Advertisement

ಪಕ್ಷದ ಆದೇಶ ಪಾಲಿಸಲು ಸೂಚನೆ

10:25 PM Apr 07, 2019 | Lakshmi GovindaRaju |

ಬೆಂಗಳೂರು: ಮಂಡ್ಯ ನಾಯಕರ ಅಸಮಾಧಾನದ ನಡುವೆಯೂ ಸಿದ್ದರಾಮಯ್ಯ ಪಕ್ಷದ ಆದೇಶದಂತೆ ಎಲ್ಲರೂ ಕಡ್ಡಾಯವಾಗಿ ಮೈತ್ರಿ ಪಕ್ಷಗಳ ಅಭ್ಯರ್ಥಿ, ನಿಖಿಲ್‌ ಪರವಾಗಿ ಪ್ರಚಾರ ಮಾಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಅಲ್ಲದೇ ಮಂಡ್ಯದಲ್ಲಿ ಸಿದ್ದರಾಮಯ್ಯ ಪ್ರಚಾರ ಕೈಗೊಳ್ಳುವುದರಿಂದ ಎಲ್ಲರೂ ಜೊತೆಗಿರುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್‌ ಗಾಂಧಿ ಕೂಡ ಮಂಡ್ಯ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಕೊಳ್ಳುವುದರಿಂದ ಯಾವುದೇ ಕಾರಣಕ್ಕೂ ಅವರಿಗೆ ಇರಿಸು ಮುರುಸು ಆಗದಂತೆ ನಡೆದುಕೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರ ಮನವೊಲಿಕೆ ನಡುವೆಯೂ ಚಲುವರಾಯಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ ಹಾಗೂ ಪಿ.ಎಂ.ನರೇಂದ್ರಸ್ವಾಮಿ ಸಹಕಾರ ನೀಡಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಅದೇ ಕಾರಣಕ್ಕೆ ಸೋಮವಾರ ಮತ್ತೂಂದು ಸಭೆ ನಡೆಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಧಾನ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವ ಜಮೀರ್‌ ಅಹಮದ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next