Advertisement

ಶುಲ್ಕ ಪಾವತಿ ದಿನಾಂಕ ವಿಸ್ತರಿಸಲು ಸೂಚನೆ

11:39 PM Aug 07, 2019 | Lakshmi GovindaRaj |

ಬೆಂಗಳೂರು: ಕರ್ನಾಟಕದ ವಿವಿಧ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಸಿಇಟಿ ಎರಡನೇ ಮುಂದುವರಿದ ಸುತ್ತಿನ ಶುಲ್ಕ ಪಾವತಿ ದಿನಾಂಕ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎರಡನೇ ಮುಂದುವರಿದ ಸುತ್ತಿನ ಶುಲ್ಕ ಪಾವತಿಗೆ ಬುಧವಾರ ಕೊನೆಯ ದಿನವಾಗಿತ್ತು.

Advertisement

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಂದು ವಾರಗಳ ಕಾಲ ಅವಧಿ ವಿಸ್ತರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಿಎಂ ಸೂಚನೆ ಹಿನ್ನೆಲೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಸಿಇಟಿಯ 2ನೇ ಮುಂದುವರಿದ ಸುತ್ತಿನ ಶುಲ್ಕ ಪಾವತಿ ಮತ್ತು ಕಾಲೇಜು ಪ್ರವೇಶ ದಿನಾಂಕವನ್ನು ಆ.13ರವರೆಗೂ ವಿಸ್ತರಿಸಿ ಸುತ್ತೋಲೆ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next