Advertisement

ಒಗ್ಗಟ್ಟು ಪ್ರದರ್ಶಿಸಲು ಕೈ ಶಾಸಕರಿಗೆ ಸೂಚನೆ 

07:05 AM May 25, 2018 | Team Udayavani |

ಬೆಂಗಳೂರು: ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡುವ ಸಂದರ್ಭದಲ್ಲಿ ಹಾಗೂ ಸ್ಪೀಕರ್‌ ಚುನಾವಣೆಯಲ್ಲಿ
ಎಲ್ಲರೂ ಒಗ್ಗಟ್ಟು ಪ್ರದರ್ಶಿಸುವಂತೆ ಕಾಂಗ್ರೆಸ್‌ ಶಾಸಕರಿಗೆ ಪಕ್ಷದ ನಾಯಕರು ಸೂಚಿಸಿದ್ದಾರೆ.

Advertisement

ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಶಾಸಕರ ಜತೆಯಲ್ಲಿ ಸಭೆ ನಡೆಸಿದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್‌ ಹಾಗೂ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌, ಸಿಎಂ ಕುಮಾರಸ್ವಾಮಿ ಪರ ಬೆಂಬಲ ಸೂಚಿಸುವಂತೆ ವಿಪ್‌ ಜಾರಿಗೊಳಿಸಿದ್ದಾರೆ.

ಬಿಜೆಪಿಯ ಯಾವುದೇ ಪ್ರಚೋದನೆಗೆ ಪ್ರತಿಕ್ರಿಯೆ ನೀಡದೆ ಮೌನವಾಗಿ ವಿಶ್ವಾಸಮತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಿವಿ ಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next