Advertisement

ಅಕ್ರಮ ಆಸ್ತಿ ಗಳಿಕೆ ಆರೋಪ: ಈಶ್ವರಪ್ಪಗೆ ನೋಟಿಸ್‌

07:05 AM Apr 17, 2018 | Team Udayavani |

ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಮರು ಪರಿಶೀಲನೆಗೆ ಕೋರಿರುವ ಅರ್ಜಿ ಸಂಬಂಧ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ, ಬಿಜೆಪಿ ಪ್ರಮುಖ ನಾಯಕ ಕೆ.ಎಸ್‌.ಈಶ್ವರಪ್ಪ ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಶಿವಮೊಗ್ಗದ ವಕೀಲ ಬಿ.ವಿನೋದ್‌ ಸಲ್ಲಿಸಿರುವ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯ ಪ್ರತಿವಾದಿಗಳಾದ ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್‌, ಪುತ್ರಿ ಶಾಲಿನಿ ಮತ್ತಿತರರಿಗೆ ನೋಟಿಸ್‌ ಜಾರಿ ಮಾಡಿದೆ.

ಜತೆಗೆ ಪ್ರಕರಣದ ತನಿಖೆ ಸಂಬಂಧ ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ನ್ಯಾಯಾಲಯಕ್ಕೆ ನೀಡಿರುವ ದಾಖಲೆಗಳು ಹಾಗೂ ಅರ್ಜಿದಾರರ ಬಳಿ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕೃತ ದಾಖಲೆಗಳಿದ್ದರೆ ಅವುಗಳನ್ನೂ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next