Advertisement

ಕೋವಿಡ್ 19 ಭೀತಿ: ಜುಮಾ ನಮಾಜ್ ಸಮಯ ಕಡಿತಗೊಳಿಸಲು ಸೂಚನೆ

01:08 AM Mar 21, 2020 | keerthan |

ಬೆಂಗಳೂರು: ಕೋವಿಡ್ 19 ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳಿಗೆ ಪೂರಕವಾಗಿ ಮಸೀದಿಗಳಲ್ಲಿ ಶುಕ್ರವಾರದ ವಿಶೇಷ ಪ್ರಾರ್ಥನೆಯ (ಜುಮಾ ನಮಾಜ್) ಸಮಯವನ್ನು ಕಡಿತಗೊಳಿಸಲು ಸೂಚಿಸಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬುಧವಾರ (ಮಾ.18) ರಂದು ಪ್ರಕಟಣೆ ಹೊರಡಿಸಿದೆ.

Advertisement

ಈ ಕುರಿತು ಕರ್ನಾಟಕದ ಅಮಿರೆ ಶರಿಯತ್ ಮೌಲಾನ ಸಗೀರ್ ಅಹ್ಮದ್ ರಶಾದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಧಾರ್ಮಿಕ ಮುಖಂಡರ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಡಾ. ಮಹ್ಮದ್ ಯೂಸುಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-ಶುಕ್ರವಾರದ ಪ್ರಾರ್ಥನೆಯನ್ನು ಮುಂದಿನ ಮೂರು ವಾರಗಳ ಕಾಲ 15 ನಿಮಿಷಕ್ಕೆ ಸಿಮೀತಗೊಳಿಸಬೇಕು. ಈ ವೇಳೆ ಸಾರ್ವಜನಿಕವಾಗಿ ಧ್ವನಿವರ್ಧಕಗಳನ್ನು ಬಳಸಬಾರದು.

– ಪ್ರತಿ ದಿನದ ಐದು ಹೊತ್ತಿನ ನಮಾಜ್ ವೇಳೆ ಮಸೀದಿಯಲ್ಲಿ ಶುಚಿತ್ವ ಕಾಪಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಾರ್ಥನೆಯನ್ನು ಆದಷ್ಟು ಕಡಿಮೆ ಸಮಯದಲ್ಲಿ ಮುಗಿಸಬೇಕು. ಬಳಿಕ ಸಾಧ್ಯವಾದಷ್ಟು ಬೇಗ ಅಲ್ಲಿಂದ ತೆರಳಬೇಕು.

– ಮಸೀದಿ ಹಾಗೂ ದರ್ಗಾಗಳ ಆವರಣಗಳನ್ನು ಸ್ವಚ್ಚವಾಗಿಡಬೇಕು. ಹೆಚ್ಚು ಜನರು ಸೇರಲು ಅಥವಾ ತಂಗಲು ಅವಕಾಶ ಮಾಡಿಕೊಬಾರದು.

Advertisement

– ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಸರ್ಕಾರ ಹೊರಡಿಸಿರುವ ಆದೇಶದಂತೆ ಮದರಸಾಗಳಿಗೆ ರಜೆ ನೀಡಬೇಕು.

– ಧಾರ್ಮಿಕ ಸಭೆ ಹಾಗೂ ಉರುಸ್ ಆಚರಣೆ ವೇಳೆ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸಬೇಕು.

– ಉಸಿರಾಟದ ಸಮಸ್ಯೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಜನ ಮಸೀದಿ, ದರ್ಗಾ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಬರದಂತೆ ಮನವಿ ಮಾಡಲಾಗಿದೆ.

-ಕೋವಿಡ್ 19 ವೈರಸ್ ಸೋಂಕು ಗಂಡಾಂತರದಿಂದ ಪಾರು ಮಾಡುವಂತೆ ದೇವರಲ್ಲಿ ವಿಶೇಷ ದುವಾ (ಪ್ರಾರ್ಥನೆ) ಮಾಡುವಂತೆ ಮನವಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next