Advertisement

Cauvery water ತಮಿಳುನಾಡಿಗೆ ನೀರು ಹರಿಸಲು ಸೂಚನೆ

12:38 AM Jul 12, 2024 | Team Udayavani |

ಹೊಸದಿಲ್ಲಿ/ಬೆಂಗಳೂರು: ಉತ್ತಮ ಮಳೆ ಯಾದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಜು. 12ರಿಂದ ಜು. 31ರ ವರೆಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಗುರುವಾರ ಕರ್ನಾಟಕ ಸರಕಾರಕ್ಕೆ ಆದೇಶಿಸಿದೆ.

Advertisement

ಹೊಸದಿಲ್ಲಿಯಲ್ಲಿ ನಡೆದ ಸಿಡಬ್ಲ್ಯುಆರ್‌ಸಿ 99ನೇ ಸಭೆ ಯಲ್ಲಿ, ಪ್ರಸಕ್ತ ಜಲ ವರ್ಷದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ. ಕರ್ನಾಟಕದಲ್ಲಿ ವಾಡಿಕೆ ಮಳೆಯಾಗಿದೆ. ಆದರೂ ಸುಪ್ರೀಂ ಕೋರ್ಟ್‌ನ ಆದೇಶದಂತೆ ಬಿಳಿ ಗುಂಡ್ಲುವಿಗೆ ನಿಗದಿತ ಪ್ರಮಾಣದಲ್ಲಿ ನೀರು ಬಿಟ್ಟಿಲ್ಲ ಎಂದು ತಮಿಳುನಾಡು ತನ್ನ ವಾದವನ್ನು ಮಂಡಿಸಿತು. ಬಳಿಕ ಕರ್ನಾಟಕದ ವಾದವನ್ನು ಆಲಿಸಿದ ಸಿಡಬ್ಲ್ಯುಆರ್‌ಸಿ ಜು. 31ರ ವರೆಗೆ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚಿಸಿತು.

 

Advertisement

Udayavani is now on Telegram. Click here to join our channel and stay updated with the latest news.

Next