Advertisement

ಬರ ಕಾಮಗಾರಿ ನಿರ್ವಹಣೆಗೆ ಸೂಚನೆ

01:37 PM Jul 05, 2017 | |

ವಿಜಯಪುರ: ಬರ ನಿರ್ವಹಣೆ ಮತ್ತು ನೀರಿನ ಕೊರತೆ ಎದುರಿಸಲು ಸಂಬಂಧಪಟ್ಟ ಇಲಾಖೆಯಲ್ಲಿರುವ 
ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಬೇಕು. ನಿಖರ ಮಾಹಿತಿ ಸಂಗ್ರಹಿಸಿ ಮುಂದಿನ ಯೋಜನೆಗಳ
ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ ಸೂಚನೆ ನೀಡಿದರು.

Advertisement

ಮಂಗಳವಾರ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬರ ಹಾಗೂ ನೀರಿನ ಕೊರತೆ ಎದುರಿಸುತ್ತಿರುವ
ಜಿಲ್ಲೆಯಲ್ಲಿ ಕೇಂದ್ರದ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾ ಕ್ರಿಯಾಯೋಜನೆ ರಚಿಸುವ ಜಿಲ್ಲಾಮಟ್ಟದ ತಾಂತ್ರಿಕ
ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಬಿತ್ತನೆ ಆರಂಭವಾಗಿರುವುದರಿಂದ
ಯಾವ ಬೆಳೆಗೆ ಎಷ್ಟು ನೀರಿನ ಅಗತ್ಯವಿದೆ ಎಂಬುವುದು ಅರಿತುಕೊಳ್ಳಬೇಕು. ಕೊಳವೆ ಬಾವಿ, ಕಾಲುವೆ ಸೇರಿದಂತೆ
ಮುಂತಾದ ನೀರಿನ ಮೂಲಗಳ ಮೂಲಕ ಬೆಳೆಗಳಿಗೆ ಅಗತ್ಯಾನುಸಾರ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು.
ಬ್ಲಾಕ್‌ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಮುಂದಿನ ಸಭೆಯಲ್ಲಿ ಪರಿಶೀಲನೆ ನಡೆಸಿ ಮುಂದಿನ ಯೋಜನೆ 
ರೂಪಿಸಲಾಗುವುದು ಎಂದು ಹೇಳಿದರು. 

ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಭೆಗೆ ಮಾಹಿತಿ ನೀಡಿ, ರಾಜ್ಯದ 16 ಬರಪೀಡಿತ ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆಯೂ ಸೇರಿದೆ. ಕೃಷಿಯ ಸ್ಥಿರತೆ, ಅಂತರ್ಜಲ ಅಭಿವೃದ್ಧಿ, ಕಾಲುವೆ ನಿರ್ಮಾಣ, ಕೃಷಿ ಹೊಂಡ, ಸಣ್ಣ ನೀರಾವರಿ, ನೀರಿನ ಪೋಲು ತಡೆಗಟ್ಟುವಿಕೆ, ಮುಂತಾದ ಕ್ರಿಯಾಯೋಜನೆ ರೂಪಿಸಲು ಜಿಲ್ಲಾ ಧಿಕಾರಿ ಅಧ್ಯಕ್ಷತೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಜಿಪಂ ಸಿಇಒ ಎಂ.ಸುಂದರೇಶಬಾಬು, ಅಪರ ಜಿಲ್ಲಾಧಿಕಾರಿ ಎಚ್‌.ಬಿ. ಬೂದೆಪ್ಪ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next